5:51 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

27/11/2022, 11:51

ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ.
ಶ್ರೀ ಕ್ಷೇತ್ರದ ರಾಜಾಂಗಣ ಬಂಟಕoಬ ಹಾಗೂ ಪಿಲಿಚಾಮುಂಡಿ ದೈವಸ್ಥಾನ 1.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ದೈವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಮುಖರೊಂದಿಗೆ ಜೀರ್ಣೋದ್ಧಾರ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ನೀಡಿದರು.


ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ಪೂಜಾ ವಿಧಿವಿಧಾನ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಶಾಸಕರು ಮಾತನಾಡಿ, ಅನುಜ್ಞಾವಿಧಿಗೆ ಶುದ್ಧ ಎಳ್ಳೆಣ್ಣೆ ಸೇವೆ ನೀಡುವ ಭಕ್ತರಿಗೆ ಅವಕಾಶ ಇದೆ. ಕರಸೇವೆಯ ಮೂಲಕ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಈವರೆಗೆ ಸುಮಾರು 1,500 ಕರಸೇವಕರು ನಿರಂತರ ಕರಸೇವೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಸಂಘ-ಸ0ಸ್ಥೆಗಳು ಹಾಗೂ ಊರ ಭಕ್ತರಿಂದ ಕರಸೇವೆ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ, ಮಧ್ಯಸ್ಥ ಬ್ರಾಣಬೆಟ್ಟುಗುತ್ತು ಪ್ರತಾಪಚಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶಿವಾಜಿ ಶೆಟ್ಟಿ ಕೊಳಕೆಬೈಲು, ಉಪಾಧ್ಯಕ್ಷ ಕೃಷ್ಣ ಅಮೀನ್, ಇಂಜಿನಿಯರ್ ರತೀಶ್ ದಾಸ್, 16 ಗುತ್ತುಮನೆತನದ ಪ್ರಮುಖರು, ಓಂ ಪ್ರಕಾಶ್ ಶೆಟ್ಟಿ, ಪ್ರತೋಷ್ ಮಲ್ಲಿ, ಡಾ. ಮೋಹನ್‌ದಾಸ್ ಶೆಟ್ಟಿ, ವಿದ್ಯಾ ಜೋಗಿ, ಪ್ರಕಾಶ್ ಭಂಡಾರಿ, ರಮೇಶ್ ಅಮೀನ್, ಸುರೇಶ್ ಅಂಚನ್, ರಂಗನಾಥ ಭಂಡಾರಿ, ಹರೀಶ್ ಶೆಟ್ಟಿ ನಡುಗುತ್ತು, ಮೋಹನ್ ಪೂಜಾರಿ ಕಬೆತ್ತಿಗುತ್ತು, ಶೇಖರ ಸಪಲಿಗ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್ ಚೌಟ, ವಿವಿಧ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ವಿಲೇದಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು