1:59 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

27/11/2022, 11:51

ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ.
ಶ್ರೀ ಕ್ಷೇತ್ರದ ರಾಜಾಂಗಣ ಬಂಟಕoಬ ಹಾಗೂ ಪಿಲಿಚಾಮುಂಡಿ ದೈವಸ್ಥಾನ 1.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ದೈವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಮುಖರೊಂದಿಗೆ ಜೀರ್ಣೋದ್ಧಾರ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ನೀಡಿದರು.


ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ಪೂಜಾ ವಿಧಿವಿಧಾನ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಶಾಸಕರು ಮಾತನಾಡಿ, ಅನುಜ್ಞಾವಿಧಿಗೆ ಶುದ್ಧ ಎಳ್ಳೆಣ್ಣೆ ಸೇವೆ ನೀಡುವ ಭಕ್ತರಿಗೆ ಅವಕಾಶ ಇದೆ. ಕರಸೇವೆಯ ಮೂಲಕ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಈವರೆಗೆ ಸುಮಾರು 1,500 ಕರಸೇವಕರು ನಿರಂತರ ಕರಸೇವೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಸಂಘ-ಸ0ಸ್ಥೆಗಳು ಹಾಗೂ ಊರ ಭಕ್ತರಿಂದ ಕರಸೇವೆ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ, ಮಧ್ಯಸ್ಥ ಬ್ರಾಣಬೆಟ್ಟುಗುತ್ತು ಪ್ರತಾಪಚಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶಿವಾಜಿ ಶೆಟ್ಟಿ ಕೊಳಕೆಬೈಲು, ಉಪಾಧ್ಯಕ್ಷ ಕೃಷ್ಣ ಅಮೀನ್, ಇಂಜಿನಿಯರ್ ರತೀಶ್ ದಾಸ್, 16 ಗುತ್ತುಮನೆತನದ ಪ್ರಮುಖರು, ಓಂ ಪ್ರಕಾಶ್ ಶೆಟ್ಟಿ, ಪ್ರತೋಷ್ ಮಲ್ಲಿ, ಡಾ. ಮೋಹನ್‌ದಾಸ್ ಶೆಟ್ಟಿ, ವಿದ್ಯಾ ಜೋಗಿ, ಪ್ರಕಾಶ್ ಭಂಡಾರಿ, ರಮೇಶ್ ಅಮೀನ್, ಸುರೇಶ್ ಅಂಚನ್, ರಂಗನಾಥ ಭಂಡಾರಿ, ಹರೀಶ್ ಶೆಟ್ಟಿ ನಡುಗುತ್ತು, ಮೋಹನ್ ಪೂಜಾರಿ ಕಬೆತ್ತಿಗುತ್ತು, ಶೇಖರ ಸಪಲಿಗ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್ ಚೌಟ, ವಿವಿಧ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ವಿಲೇದಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು