4:55 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

27/11/2022, 11:51

ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ.
ಶ್ರೀ ಕ್ಷೇತ್ರದ ರಾಜಾಂಗಣ ಬಂಟಕoಬ ಹಾಗೂ ಪಿಲಿಚಾಮುಂಡಿ ದೈವಸ್ಥಾನ 1.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ದೈವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಮುಖರೊಂದಿಗೆ ಜೀರ್ಣೋದ್ಧಾರ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ನೀಡಿದರು.


ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ಪೂಜಾ ವಿಧಿವಿಧಾನ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಶಾಸಕರು ಮಾತನಾಡಿ, ಅನುಜ್ಞಾವಿಧಿಗೆ ಶುದ್ಧ ಎಳ್ಳೆಣ್ಣೆ ಸೇವೆ ನೀಡುವ ಭಕ್ತರಿಗೆ ಅವಕಾಶ ಇದೆ. ಕರಸೇವೆಯ ಮೂಲಕ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಈವರೆಗೆ ಸುಮಾರು 1,500 ಕರಸೇವಕರು ನಿರಂತರ ಕರಸೇವೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಸಂಘ-ಸ0ಸ್ಥೆಗಳು ಹಾಗೂ ಊರ ಭಕ್ತರಿಂದ ಕರಸೇವೆ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ, ಮಧ್ಯಸ್ಥ ಬ್ರಾಣಬೆಟ್ಟುಗುತ್ತು ಪ್ರತಾಪಚಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶಿವಾಜಿ ಶೆಟ್ಟಿ ಕೊಳಕೆಬೈಲು, ಉಪಾಧ್ಯಕ್ಷ ಕೃಷ್ಣ ಅಮೀನ್, ಇಂಜಿನಿಯರ್ ರತೀಶ್ ದಾಸ್, 16 ಗುತ್ತುಮನೆತನದ ಪ್ರಮುಖರು, ಓಂ ಪ್ರಕಾಶ್ ಶೆಟ್ಟಿ, ಪ್ರತೋಷ್ ಮಲ್ಲಿ, ಡಾ. ಮೋಹನ್‌ದಾಸ್ ಶೆಟ್ಟಿ, ವಿದ್ಯಾ ಜೋಗಿ, ಪ್ರಕಾಶ್ ಭಂಡಾರಿ, ರಮೇಶ್ ಅಮೀನ್, ಸುರೇಶ್ ಅಂಚನ್, ರಂಗನಾಥ ಭಂಡಾರಿ, ಹರೀಶ್ ಶೆಟ್ಟಿ ನಡುಗುತ್ತು, ಮೋಹನ್ ಪೂಜಾರಿ ಕಬೆತ್ತಿಗುತ್ತು, ಶೇಖರ ಸಪಲಿಗ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್ ಚೌಟ, ವಿವಿಧ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ವಿಲೇದಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು