3:11 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

27/11/2022, 11:51

ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ.
ಶ್ರೀ ಕ್ಷೇತ್ರದ ರಾಜಾಂಗಣ ಬಂಟಕoಬ ಹಾಗೂ ಪಿಲಿಚಾಮುಂಡಿ ದೈವಸ್ಥಾನ 1.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ದೈವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಮುಖರೊಂದಿಗೆ ಜೀರ್ಣೋದ್ಧಾರ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ನೀಡಿದರು.


ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ಪೂಜಾ ವಿಧಿವಿಧಾನ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಶಾಸಕರು ಮಾತನಾಡಿ, ಅನುಜ್ಞಾವಿಧಿಗೆ ಶುದ್ಧ ಎಳ್ಳೆಣ್ಣೆ ಸೇವೆ ನೀಡುವ ಭಕ್ತರಿಗೆ ಅವಕಾಶ ಇದೆ. ಕರಸೇವೆಯ ಮೂಲಕ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಈವರೆಗೆ ಸುಮಾರು 1,500 ಕರಸೇವಕರು ನಿರಂತರ ಕರಸೇವೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಸಂಘ-ಸ0ಸ್ಥೆಗಳು ಹಾಗೂ ಊರ ಭಕ್ತರಿಂದ ಕರಸೇವೆ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ, ಮಧ್ಯಸ್ಥ ಬ್ರಾಣಬೆಟ್ಟುಗುತ್ತು ಪ್ರತಾಪಚಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶಿವಾಜಿ ಶೆಟ್ಟಿ ಕೊಳಕೆಬೈಲು, ಉಪಾಧ್ಯಕ್ಷ ಕೃಷ್ಣ ಅಮೀನ್, ಇಂಜಿನಿಯರ್ ರತೀಶ್ ದಾಸ್, 16 ಗುತ್ತುಮನೆತನದ ಪ್ರಮುಖರು, ಓಂ ಪ್ರಕಾಶ್ ಶೆಟ್ಟಿ, ಪ್ರತೋಷ್ ಮಲ್ಲಿ, ಡಾ. ಮೋಹನ್‌ದಾಸ್ ಶೆಟ್ಟಿ, ವಿದ್ಯಾ ಜೋಗಿ, ಪ್ರಕಾಶ್ ಭಂಡಾರಿ, ರಮೇಶ್ ಅಮೀನ್, ಸುರೇಶ್ ಅಂಚನ್, ರಂಗನಾಥ ಭಂಡಾರಿ, ಹರೀಶ್ ಶೆಟ್ಟಿ ನಡುಗುತ್ತು, ಮೋಹನ್ ಪೂಜಾರಿ ಕಬೆತ್ತಿಗುತ್ತು, ಶೇಖರ ಸಪಲಿಗ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್ ಚೌಟ, ವಿವಿಧ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ವಿಲೇದಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು