9:28 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

27/11/2022, 11:51

ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ.
ಶ್ರೀ ಕ್ಷೇತ್ರದ ರಾಜಾಂಗಣ ಬಂಟಕoಬ ಹಾಗೂ ಪಿಲಿಚಾಮುಂಡಿ ದೈವಸ್ಥಾನ 1.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ದೈವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಮುಖರೊಂದಿಗೆ ಜೀರ್ಣೋದ್ಧಾರ ಕಾರ್ಯಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ನೀಡಿದರು.


ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ಪೂಜಾ ವಿಧಿವಿಧಾನ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಶಾಸಕರು ಮಾತನಾಡಿ, ಅನುಜ್ಞಾವಿಧಿಗೆ ಶುದ್ಧ ಎಳ್ಳೆಣ್ಣೆ ಸೇವೆ ನೀಡುವ ಭಕ್ತರಿಗೆ ಅವಕಾಶ ಇದೆ. ಕರಸೇವೆಯ ಮೂಲಕ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಈವರೆಗೆ ಸುಮಾರು 1,500 ಕರಸೇವಕರು ನಿರಂತರ ಕರಸೇವೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಸಂಘ-ಸ0ಸ್ಥೆಗಳು ಹಾಗೂ ಊರ ಭಕ್ತರಿಂದ ಕರಸೇವೆ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ, ಮಧ್ಯಸ್ಥ ಬ್ರಾಣಬೆಟ್ಟುಗುತ್ತು ಪ್ರತಾಪಚಂದ್ರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶಿವಾಜಿ ಶೆಟ್ಟಿ ಕೊಳಕೆಬೈಲು, ಉಪಾಧ್ಯಕ್ಷ ಕೃಷ್ಣ ಅಮೀನ್, ಇಂಜಿನಿಯರ್ ರತೀಶ್ ದಾಸ್, 16 ಗುತ್ತುಮನೆತನದ ಪ್ರಮುಖರು, ಓಂ ಪ್ರಕಾಶ್ ಶೆಟ್ಟಿ, ಪ್ರತೋಷ್ ಮಲ್ಲಿ, ಡಾ. ಮೋಹನ್‌ದಾಸ್ ಶೆಟ್ಟಿ, ವಿದ್ಯಾ ಜೋಗಿ, ಪ್ರಕಾಶ್ ಭಂಡಾರಿ, ರಮೇಶ್ ಅಮೀನ್, ಸುರೇಶ್ ಅಂಚನ್, ರಂಗನಾಥ ಭಂಡಾರಿ, ಹರೀಶ್ ಶೆಟ್ಟಿ ನಡುಗುತ್ತು, ಮೋಹನ್ ಪೂಜಾರಿ ಕಬೆತ್ತಿಗುತ್ತು, ಶೇಖರ ಸಪಲಿಗ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್ ಚೌಟ, ವಿವಿಧ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ವಿಲೇದಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು