12:48 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಕಾಡಾನೆ ದಾಳಿಗೆ ಕೇವಲ 4 ದಿನಗಳಲ್ಲಿ ಮತ್ತೊಂದು ಬಲಿ; ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ

28/07/2025, 11:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಕೇವಲ 4 ದಿನಗಳ ಅಂತರದಲ್ಲಿ ಎನ್.ಆರ್.ಪುರ ತಾಲೂಕಿನಲ್ಲಿ
ಮತ್ತೊಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ.ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ಸುಬ್ರಾಯ ಗೌಡ (65) ಎಂಬ ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ. 4 ದಿನಗಳ ಹಿಂದೆ ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಕವಿತಾ ಆನೆ ದಾಳಿಗೆ ಬಲಿಯಾಗಿದ್ದರು.ಇದೀಗ 4 ದಿನ ಕಳೆಯುವಷ್ಟರಲ್ಲಿ ಮತ್ತೊಬ್ಬರು ಆನೆ ದಾಳಿಗೆ ಕೊನೆಯುಸಿರೆಳೆದಿದ್ದಾರೆ.


ಮಲೆನಾಡಲ್ಲಿ ಕಾಡಾನೆ ಹಾವಾಳಿ ಮಿತಿ ಮೀರಿದೆ.
ಭಾನುವಾರ ಮೂಡಿಗೆರೆ-ಬೇಲೂರು ಗಡಿಯಲ್ಲಿ 25 ಕಾಡಾನೆಗಳು ಕಾಣಿಸಿಕೊಂಡಿದ್ದವು. ಮೇಲಿಂದ ಮೇಲೆ ಆನೆ ದಾಳಿ ಪ್ರಕರಣ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಪ್ರತಿಭಟನೆ:* ಬಾಳೆಹೊನ್ನೂರಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವಿರುದ್ದ ಮಲೆನಾಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು