10:15 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಸ್ಮಾರ್ಟ್ ಸಿಟಿಯಲ್ಲಿ ಖಾಸಗಿ ಟೆಲಿಕಾಂ ಕಂಪನಿಯ ಹೊಂಡಕ್ಕೆ ಬಿದ್ದ ಮಹಿಳೆ!

20/12/2022, 13:57

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@,gmail.com

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ಷದ 365 ದಿವಸವೂ ಅಗೆಯುವ ಮತ್ತು ಮುಚ್ಚುವ ಕಾಮಗಾರಿ ನಡೆಯುತ್ತಲೇ ಇರುವುದರಿಂದ ಜನರಿಗೆ ಕಿರಿಕಿರಿ ತಪ್ಪಿದ್ದೇ ಇಲ್ಲ. ಇದೀಗ ಪಾಲಿಕೆ ವ್ಯಾಪ್ತಿಯಲ್ಲಿ ಖಾಸಗಿ ಟೆಲಿಫೋನ್ ಕಂಪನಿ ತನ್ನ ಕೇಬಲ್ ಗೆ ತೋಡಿಟ್ಟ ಹೊಂಡಕ್ಕೆ ಮಹಿಳೆಯೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದಾರೆ.


ನಗರದ ಜ್ಯೋತಿ ವೃತ್ತದ ಸೋಜ ಆರ್ಕೇಡ್‌ ಬಳಿ ಈ ಘಟನೆ ನಡೆದಿದೆ. ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್‌ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 50ರ ಹರೆಯದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ. ಸುಮಾರು 6 ಅಡಿ ಆಳದ ಗುಂಡಿಗೆ ಮಹಿಳೆ ಬಿದ್ದಿದ್ದರು. ತೀವ್ರವಾದ ಏಟು ತಗಲಿದ ಮಹಿಳೆ ಸಹಾಯಕ್ಕಾಗಿ ಮೊರೆ ಹೋಗಿದ್ದಾರೆ. ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಮೇಲೆತ್ತಿದ್ದಾರೆ.


ಪೈಪ್, ಕೇಬಲ್ ಮುಂತಾದ ಕಾಮಗಾರಿಯ ನೆಪದಲ್ಲಿ ಹೊಂಡ ತೋಡಿಟ್ಟು ಅದಕ್ಕೆ ಯಾವುದೇ ಗಾರ್ಡ್ ಹಾಕದೆ ತಿಂಗಳುಗಟ್ಟಲೆ ಇಡುವುದು ಇದು ಮೊದಲ ಬಾರಿಯೇನಲ್ಲ. ಪಾಲಿಕೆಯ 60 ವಾರ್ಡ್ ಗಳ ಪೈಕಿ ಯಾವುದಾದರೊಂದು ವಾರ್ಡ್ ನಲ್ಲಿ ಇಂತಹ ಮೃತ್ಯುಕೂಪ ಇದ್ದೇ ಇರುತ್ತದೆ. ಇದೀಗ ಏರ್ ಟೆಲ್ ಕಂಪನಿಯು ತನ್ನ ಕೇಬಲ್‌ ಕಾಮಗಾರಿಗೆ ಪಾಲಿಕೆಯ ಪರ್ಮಿಷನ್ ಇಲ್ಲದೆ ಸೋಜ ಆರ್ಕೇಡ್‌ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಅಗೆಯುವ ಕೆಲಸ ಮಾಡುತ್ತಿದೆ.

ತೋಡಿಟ್ಡ ಹೊಂಡವನ್ನು ಮುಚ್ಚದೇ ಹಾಗೇ ಬಿಟ್ಟಿರುವುದರಿಂದ ಮಹಿಳೆ ಯೊಬ್ಬರು ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ.
ಮಹಿಳೆ ಕವುಚಿಕೊಂಡು ಬಿದ್ದಿದ್ದು,ತಲೆಯ ಭಾಗದ ಗುಂಡಿಯ ಒಳಗೆ ಬಿದ್ದಿತ್ತು ಎಂದು ಪ್ರತ್ಯಕ್ಷ ಸಾಕ್ಷಿಗಳು ಹೇಳುತ್ತಾರೆ. ಮಹಿಳೆಯ
ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯವಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕುರಿತು ಪಾಲಿಕೆಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರನ್ನು ರಿಪೋರ್ಟರ್ ಕರ್ನಾಟಕ ಸಂಪರ್ಕಿಸಿದಾಗ, ಏರ್ ಟೆಲ್ ಕಂಪನಿಯವರು ಈ ಹೊಂಡ ತೋಡಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಇದೀಗ ಹೊಂಡವನ್ನು ಮುಚ್ಚಲಾಗಿದೆ. ಸಂತ್ರಸ್ತ ಮಹಿಳೆ ಈ ಕುರಿತು ದೂರು ನೀಡಿದರೆ, ಅವರಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು