4:49 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

02/01/2026, 21:44

ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ನಡೆದ ಗಲಾಟೆಯ ತನಿಖೆಯನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬಳ್ಳಾರಿಯಲ್ಲಿ ನಿನ್ನೆ ನಡೆದ ಘಟನೆ ರಾಜಕೀಯ ದ್ವೆಷದಿಂದ ಕೂಡಿದೆ ಹಾಗೂ ವಿರೊಧಿಗಳನ್ನು ದೈಹಿಕವಾಗಿ ಮುಗಿಸಲು ಮಾಡಿರುವ ಸಂಚು. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬಂದು ಗಲಾಟೆ ಮಾಡಿರುವುದು ಕಾಂಗ್ರೆಸ್ ಶಾಸಕರ ಪುಂಡರು ಎನ್ನುವುದು ಸ್ಪಷ್ಟ. ಅಲ್ಲದೇ ಎಂಟು ಗುಂಡು ಅವರ ಮನೆಯ ಮುಂದೆನೇ ಕಾಂಗ್ರೆಸ್ ಶಾಸಕರ ಸೆಕ್ಯುರಿಟಿ ಹಾರಿಸಿರುವುದು ವಿಡಿಯೊಗಳಲ್ಲಿ ಸ್ಪಷ್ಟವಾಗಿದೆ. ಇಷ್ಟೆಲ್ಲಾ ಆದರೂ ಯಾರ ಗನ್ ನಿಂದ ಗುಂಡು ಹಾರಿದೆ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಎಸ್ ಐಟಿ ರಚನೆ ಮಾಡುವ ಮಾತನಾಡುತ್ತಿದ್ದಾರೆ. ಆದರೆ, ಈಗಾಗಲೇ ಡಜನ್ ಗಟ್ಟಲೇ ಎಸ್ ಐಟಿ ರಚನೆ ಮಾಡಿದ್ದು, ಎಸ್ ಐಟಿಯಿಂದ ತನಿಖೆ ಸಾಧ್ಯವಿಲ್ಲ. ಇದನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತಾನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದ್ವೇಷ ರಾಜಕಾರಣ ಶುರುವಾಗಿದೆ. ಕಾಂಗ್ರೆಸ್ ಪುಂಡರಿಗೆ ಪೊಲೀಸರ ಭಯ ಇಲ್ಲದಾಗಿದೆ ಪೊಲಿಸ್ ಸ್ಟೇಷನ್ ಹರಾಜಾಗಿದೆ‌ ಪೊಲಿಸರನ್ನು ಹೆದರಿಸುತ್ತ ಕಾಂಗ್ರೆಸ್ ಪುಂಡರು ಮೆರೆಯುತ್ತಿದ್ದಾರೆ. ಇದು ಅತ್ಯಂತ ಖಂಡನೀಯ. ಕೂಡಲೇ ತನಿಖೆ ಆರಂಭ ಆಗಬೆಕು. ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಸುರಕ್ಷತೆಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ದ್ವೇಷ ಭಾಷಣ ಮಾಡುವವರ ವಿರುದ್ದ ಕಾನೂನು ತಂದಿರುವ ಕಾಂಗ್ರೆಸ್ ಸರ್ಕಾರ ದ್ವೆಷದಿಂದ ಗುಂಡು ಹಾರಿಸುವ ಅವರ ಶಾಸಕರನ್ನು ಬಂಧಿಸುವ ತಾಕತ್ತು ಸಿಎಂ ಹಾಗೂ ಗೃಹ ಸಚಿವರಿಗೆ ಇದಿಯಾ ಎಂದು ಜನ ಕಾದು ನೋಡುತ್ತಿದ್ದಾರೆ‌ ಎಂದು ಇದೇ ವೇಳೆ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು