1:44 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಬಳ್ಳಾರಿ: ವಿರೋಧ ಪಕ್ಷಗಳ ಷಡ್ಯಂತ್ರ ವಿರುದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೃಹತ್ ಜಾಥಾ

05/08/2024, 20:11

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ವಿರೋಧ ಪಕ್ಷಗಳ ಷಡ್ಯಂತ್ರ ಮತ್ತು ರಾಜ್ಯಪಾಲರ ಅನುಮಾಸ್ಪದ ನಡೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಇಲ್ಲಿಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟಗಳ ವತಿಯಿಂದ ಮುಖ್ಯಮಂತ್ರಿ
ಪರವಾಗಿ ಬೆಂಬಲಿಸಿ ಬೃಹತ್ ಜಾಥಾ ನಡೆಯಿತು.
ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ, ಬೃಹತ್ ಜಾಥಾದಲ್ಲಿ ನಗರ ಶಾಸಕ ಭರತ್ ರೆಡ್ಡಿ, ಸಂಸದ ಈ ತುಕಾರಾಂ, ಕಂಪ್ಲಿ ಶಾಸರ ಗಣೇಶ್ ಮುಂತಾದವರು ಮಾತನಾಡಿ ರಾಜ್ಯಪಾಲರ ಕ್ರಮವನ್ನು ಖಂಡಿಸಿದರು.
ನಂತರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇಮಾಮ್ ಗೋಡೆಕರ್ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಅವರಿಗೆ ಬರೆದ ಮನವಿ ಪತ್ರವನ್ನು ಓದಿ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾಯಿತು.
ಜಾಥಾದಲ್ಲಿ  ಡಿಎಸ್ಎಸ್ ರಾಜ್ಯ ಸಂಚಾಲಕ ಎ. ಮಾನಯ್ಯ, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ.ಗಾದಿ ಲಿಂಗನಗೌಡ, ಹುಮಾಯೂನ್ ಖಾನ್, ಮಾನಯ್ಯ, ಮುಂಡ್ರಿಗಿ ನಾಗರಾಜ್, ಸಂಗನಕಲ್ಲು ವಿಜಯಕುಮಾರ್,
ಚಿದಾನಂದಪ್ಪ ಯಾದವ್, ನರಸಪ್ಪ, ಶಿವಶಂಕರ್, ರಫೀಕ್, ಬೆಣಕಲ್ ಬಸವರಾಜಗೌಡ, ಪಿ.ಜಗನ್ನಾಥ, ಗಾದೆಪ್ಪ, ಕುಡಿತಿನಿ ರಾಮಾಂಜನೇಯ, ಯರ್ರಿಸ್ವಾಮಿ,ಧನಂಜಯ.
ಹಮಲ್,ಭಾಗವಹಿಸಿದ್ದರು.ಕೆಪಿಸಿಸಿ, ಡಿಸಿಸಿ, ಬಿಸಿಸಿ ಪದಾಧಿಕಾರಿಗಳು,
ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಸದಸ್ಯರು,ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪ್ರತಿಭಟನಾ ಮೆರವಣಿಗೆಯನ್ನು ಬೆಂಬಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು