7:12 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

27/11/2024, 09:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್‌) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಅತಿಥಿಯಾಗಿ ಆಗಮಿಸುವರು.
ಮದ್ರಾಸ್‌ನ ಕ್ರೈಸ್ತ ಧರ್ಮ ಕ್ಷೇತ್ರದ ಭಾಗವಾಗಿದ್ದ ಬಳ್ಳಾರಿಯು 1949 ಮಾರ್ಚ್ 10ರಲ್ಲಿ ವಿಭಜನೆಗೊಂಡಿತು. ಆ ಮೂಲಕ ಪ್ರತ್ಯೇಕ ಧರ್ಮಕ್ಷೇತ್ರವಾಗಿ ಗುರುತಿಸಿಕೊಂಡಿತು. ಹೀಗೆ ರಚನೆಯಾದ ಬಳ್ಳಾರಿ ಧರ್ಮ ಕ್ಷೇತ್ರಕ್ಕೆ ಜಾನ್ ಹೋಗನ್ ಎಂಬುವವರನ್ನು ಮೊದಲು ಬಿಷಪ್ ಆಗಿ ನೇಮಿಸಲಾಗಿತ್ತು. ಅವರು ಇಂಗ್ಲೆಂಡ್‌ನವರಾಗಿದ್ದರು. ಆ ಬಳಿಕ ಆಂಬ್ರೋಸ್‌ ಎಂಬುವವರು ಬಿಷಪ್‌ ಆಗಿದ್ದರು. ಅವರು ಚೆನ್ನೈನವರಾಗಿದ್ದರು. ನಂತರ, ಕೊಡಗಿನ ವೀರಾಜಪೇಟೆಯ ಜೋಸೆಫ್‌ ಡಿಸಿಲ್ವ ಬಿಷಪ್‌ ಆದರು. ಸದ್ಯ 16 ವರ್ಷಗಳಿಂದ ಮಂಗಳೂರಿನ ಹೆನ್ರಿ ಡಿಸೋಜಾ ಅವರು ಬಿಷಪ್‌ ಆಗಿದ್ದಾರೆ.
ಸದ್ಯ ಬಳ್ಳಾರಿ ಕ್ರೈಸ್ತ ಧರ್ಮ ಕ್ಷೇತ್ರದ ಅಡಿಯಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳು ಇದ್ದವು. ಈಗ ವಿಜಯನಗರ ಹೊಸದಾಗಿ ಸೇರ್ಪಡೆಯಾಗಿದ್ದರೆ, ಕಲಬುರಗಿ ಪ್ರತ್ಯೇಕವಾಗಿದೆ. ಬಳ್ಳಾರಿ ಧರ್ಮಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಧರ್ಮ ಗುರುಗಳಿದ್ದಾರೆ ಎನ್ನುವ ಮಾಹಿತಿ ಇದೆ.
*ಅಮೃತ ಮಹೋತ್ಸವಕ್ಕೆ ಸಿಎಂ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದು 4.30ಕ್ಕೆ ಬಳ್ಳಾರಿಯ ಆರೋಗ್ಯ ಮಾತೆ ಚರ್ಚ್‌ನಲ್ಲಿ ನಡೆಯಲಿರುವ ಕ್ರೈಸ್ತ ಧರ್ಮ ಕ್ಷೇತ್ರದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು