10:35 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

27/11/2024, 09:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್‌) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಅತಿಥಿಯಾಗಿ ಆಗಮಿಸುವರು.
ಮದ್ರಾಸ್‌ನ ಕ್ರೈಸ್ತ ಧರ್ಮ ಕ್ಷೇತ್ರದ ಭಾಗವಾಗಿದ್ದ ಬಳ್ಳಾರಿಯು 1949 ಮಾರ್ಚ್ 10ರಲ್ಲಿ ವಿಭಜನೆಗೊಂಡಿತು. ಆ ಮೂಲಕ ಪ್ರತ್ಯೇಕ ಧರ್ಮಕ್ಷೇತ್ರವಾಗಿ ಗುರುತಿಸಿಕೊಂಡಿತು. ಹೀಗೆ ರಚನೆಯಾದ ಬಳ್ಳಾರಿ ಧರ್ಮ ಕ್ಷೇತ್ರಕ್ಕೆ ಜಾನ್ ಹೋಗನ್ ಎಂಬುವವರನ್ನು ಮೊದಲು ಬಿಷಪ್ ಆಗಿ ನೇಮಿಸಲಾಗಿತ್ತು. ಅವರು ಇಂಗ್ಲೆಂಡ್‌ನವರಾಗಿದ್ದರು. ಆ ಬಳಿಕ ಆಂಬ್ರೋಸ್‌ ಎಂಬುವವರು ಬಿಷಪ್‌ ಆಗಿದ್ದರು. ಅವರು ಚೆನ್ನೈನವರಾಗಿದ್ದರು. ನಂತರ, ಕೊಡಗಿನ ವೀರಾಜಪೇಟೆಯ ಜೋಸೆಫ್‌ ಡಿಸಿಲ್ವ ಬಿಷಪ್‌ ಆದರು. ಸದ್ಯ 16 ವರ್ಷಗಳಿಂದ ಮಂಗಳೂರಿನ ಹೆನ್ರಿ ಡಿಸೋಜಾ ಅವರು ಬಿಷಪ್‌ ಆಗಿದ್ದಾರೆ.
ಸದ್ಯ ಬಳ್ಳಾರಿ ಕ್ರೈಸ್ತ ಧರ್ಮ ಕ್ಷೇತ್ರದ ಅಡಿಯಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳು ಇದ್ದವು. ಈಗ ವಿಜಯನಗರ ಹೊಸದಾಗಿ ಸೇರ್ಪಡೆಯಾಗಿದ್ದರೆ, ಕಲಬುರಗಿ ಪ್ರತ್ಯೇಕವಾಗಿದೆ. ಬಳ್ಳಾರಿ ಧರ್ಮಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಧರ್ಮ ಗುರುಗಳಿದ್ದಾರೆ ಎನ್ನುವ ಮಾಹಿತಿ ಇದೆ.
*ಅಮೃತ ಮಹೋತ್ಸವಕ್ಕೆ ಸಿಎಂ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದು 4.30ಕ್ಕೆ ಬಳ್ಳಾರಿಯ ಆರೋಗ್ಯ ಮಾತೆ ಚರ್ಚ್‌ನಲ್ಲಿ ನಡೆಯಲಿರುವ ಕ್ರೈಸ್ತ ಧರ್ಮ ಕ್ಷೇತ್ರದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು