7:31 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ

21/09/2024, 23:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ.
ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ ಬಂಧಿಸಲಾಗಿದೆ.
ಈ ಘಟನೆಯ ಕುರಿತು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ರಘು ಎನ್ನುವ ಉದ್ಯಮಿ ‌ ಸೆ.12 ರಂದು ಬೆಳಿಗಿನ ಜಾವ ಬೈಕ್ ನಲ್ಲಿ 22 ಲಕ್ಷದ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ತೆಗೆದುಕೊಂಡು ಹೋಗುತ್ತಿದ್ದರು. ರಾಯದುರ್ಗಾ ಬಸ್ ನಿಲ್ದಾಣದ ಕಡೆ ಹೋಗುತ್ತಿರುವಾಗ ಅವರಿಗೆ ಕಣ್ಣಿಗೆ ಖಾರದ ಪುಡಿ ಎರಚಿ ಹಣ ಒಡೆವೆ ದರೋಡೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಮುಖ ಆರೋಪಿ ತೌಸೀಫ್ ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ನನ್ನು ಬಂಧಿಸಿದ್ದಾರೆ. ಕಳ್ಳತನಕ್ಕೆ ಸಾಥ್‌ ನೀಡಿದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಮೆಹಬೂಬ್ ಪಾಷನನ್ನೂ ಬಂಧಿಸಲಾಗಿದೆ.
ಹೆಡ್‌ ಕಾನ್ಸಟೇಬಲ್ ಮೆಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರಾಗಿದ್ದರು. ಅಸೀಫ್ ಈ ಮೊದಲು ಹೋಮ್ ಗಾರ್ಡ್ ಕೆಲಸ ಮಾಡುತ್ತಿದ್ದ. ಆ ಸಲುಗೆಯಿಂದಲೇ ದರೋಡೆ ಮಾಡುವ ಪ್ಲಾನ್ ಮಾಡಲಾಗಿತ್ತು. ಆರೋಪಗಳನ್ನು ಬಂಧಿಸಿದಾಗ ಹೆಡ್ ಕಾನ್ಸಟೇಬಲ್ ಪಾತ್ರ ಇರುವುದು ಬಯಲಿಗೆ ಬಂದಿದೆ.

ದರೋಡೆ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ 9 ಲಕ್ಷ ಹಣವನ್ನು ಪಡೆದಿದ್ದಾರೆ. ಪೊಲೀಸರು ಸದ್ಯ 15 ಲಕ್ಷದ 91 ಸಾವಿರ ರೂ ನಗದು ಮತ್ತು116 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು