6:58 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

06/12/2024, 12:47

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದ
ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸುಮಯಾ ಅವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್‌ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಮರುದಿನ ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್‌) ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದ ಸಮಸ್ಯೆಗೆ ತುತ್ತಾಗಿದ್ದ ಅವರನ್ನು 24 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತಿತ್ತು. ಬಹುತೇಕ ಚೇತರಿಸಿಕೊಂಡಿದ್ದರೂ ಕಿಡ್ನಿ ಸಮಸ್ಯೆ ಪರಿಹಾರ ಆಗಿರಲಿಲ್ಲ. ಬೆಂಗಳೂರಿಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಬೇಕು ಎಂದು ವಿಮ್ಸ್‌ ವೈದ್ಯರ ತಂಡ ನಿರ್ಧರಿಸಿತ್ತು. ಆದರೆ ಗುರುವಾರ ರಾತ್ರಿ 8ರ ಸುಮಾರಿನಲ್ಲಿ ಏಕಾಏಕಿ ರಕ್ತದೊತ್ತಡ ಕುಸಿದು ಅವರ ಆರೋಗ್ಯ ಏರುಪೇರಾಯಿತು ಎನ್ನಲಾಗಿದೆ. ಜೀವ ರಕ್ಷಕ ನೀಡಿ, ಪಿಸಿಆರ್‌ ಮಾಡಿದ ಹೊರತಾಗಿಯೂ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ ತಿಳಿಸಿದರು.
*ಶಿಶು ಸಾವು:* ವಿಮ್ಸ್‌ನಲ್ಲಿ ಗುರುವಾರ ನವಜಾತ ಶಿಶುವೊಂದು ಮೃತಪಟ್ಟಿದೆ. ‌ಬಾಣಂತಿ ಗಂಗೋತ್ರಿ ಕುಟುಂಬಸ್ಥರು, ‘ಇದು ವೈದ್ಯರ ನಿರ್ಲಕ್ಷ್ಯ’ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಿಮ್ಸ್‌, ‘ಮಗು ಹೊಟ್ಟೆಯಲ್ಲಿರುವಾಗಲೇ ಉಸಿರಾಟದ ಸಮಸ್ಯೆಯಾಗಿತ್ತು’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು