6:15 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

06/12/2024, 12:47

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದ
ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸುಮಯಾ ಅವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್‌ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಮರುದಿನ ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್‌) ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದ ಸಮಸ್ಯೆಗೆ ತುತ್ತಾಗಿದ್ದ ಅವರನ್ನು 24 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತಿತ್ತು. ಬಹುತೇಕ ಚೇತರಿಸಿಕೊಂಡಿದ್ದರೂ ಕಿಡ್ನಿ ಸಮಸ್ಯೆ ಪರಿಹಾರ ಆಗಿರಲಿಲ್ಲ. ಬೆಂಗಳೂರಿಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಬೇಕು ಎಂದು ವಿಮ್ಸ್‌ ವೈದ್ಯರ ತಂಡ ನಿರ್ಧರಿಸಿತ್ತು. ಆದರೆ ಗುರುವಾರ ರಾತ್ರಿ 8ರ ಸುಮಾರಿನಲ್ಲಿ ಏಕಾಏಕಿ ರಕ್ತದೊತ್ತಡ ಕುಸಿದು ಅವರ ಆರೋಗ್ಯ ಏರುಪೇರಾಯಿತು ಎನ್ನಲಾಗಿದೆ. ಜೀವ ರಕ್ಷಕ ನೀಡಿ, ಪಿಸಿಆರ್‌ ಮಾಡಿದ ಹೊರತಾಗಿಯೂ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ ತಿಳಿಸಿದರು.
*ಶಿಶು ಸಾವು:* ವಿಮ್ಸ್‌ನಲ್ಲಿ ಗುರುವಾರ ನವಜಾತ ಶಿಶುವೊಂದು ಮೃತಪಟ್ಟಿದೆ. ‌ಬಾಣಂತಿ ಗಂಗೋತ್ರಿ ಕುಟುಂಬಸ್ಥರು, ‘ಇದು ವೈದ್ಯರ ನಿರ್ಲಕ್ಷ್ಯ’ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಿಮ್ಸ್‌, ‘ಮಗು ಹೊಟ್ಟೆಯಲ್ಲಿರುವಾಗಲೇ ಉಸಿರಾಟದ ಸಮಸ್ಯೆಯಾಗಿತ್ತು’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು