6:55 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

06/12/2024, 12:47

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದ
ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸುಮಯಾ ಅವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್‌ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಮರುದಿನ ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್‌) ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದ ಸಮಸ್ಯೆಗೆ ತುತ್ತಾಗಿದ್ದ ಅವರನ್ನು 24 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತಿತ್ತು. ಬಹುತೇಕ ಚೇತರಿಸಿಕೊಂಡಿದ್ದರೂ ಕಿಡ್ನಿ ಸಮಸ್ಯೆ ಪರಿಹಾರ ಆಗಿರಲಿಲ್ಲ. ಬೆಂಗಳೂರಿಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಬೇಕು ಎಂದು ವಿಮ್ಸ್‌ ವೈದ್ಯರ ತಂಡ ನಿರ್ಧರಿಸಿತ್ತು. ಆದರೆ ಗುರುವಾರ ರಾತ್ರಿ 8ರ ಸುಮಾರಿನಲ್ಲಿ ಏಕಾಏಕಿ ರಕ್ತದೊತ್ತಡ ಕುಸಿದು ಅವರ ಆರೋಗ್ಯ ಏರುಪೇರಾಯಿತು ಎನ್ನಲಾಗಿದೆ. ಜೀವ ರಕ್ಷಕ ನೀಡಿ, ಪಿಸಿಆರ್‌ ಮಾಡಿದ ಹೊರತಾಗಿಯೂ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ ತಿಳಿಸಿದರು.
*ಶಿಶು ಸಾವು:* ವಿಮ್ಸ್‌ನಲ್ಲಿ ಗುರುವಾರ ನವಜಾತ ಶಿಶುವೊಂದು ಮೃತಪಟ್ಟಿದೆ. ‌ಬಾಣಂತಿ ಗಂಗೋತ್ರಿ ಕುಟುಂಬಸ್ಥರು, ‘ಇದು ವೈದ್ಯರ ನಿರ್ಲಕ್ಷ್ಯ’ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಿಮ್ಸ್‌, ‘ಮಗು ಹೊಟ್ಟೆಯಲ್ಲಿರುವಾಗಲೇ ಉಸಿರಾಟದ ಸಮಸ್ಯೆಯಾಗಿತ್ತು’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು