11:27 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬಳ್ಳಾರಿಯಲ್ಲಿ: ಜ.4,5ರಂದು ಜಿಲ್ಲಾ ಕಲಾ ವೈಭವ

02/01/2025, 23:23

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಇದೇ ಮೊದಲ ಬಾರಿಗೆ ನಗರದ ಡಾ.ಜೋಳದ ರಾಶಿ ದೊಡ್ಡನಗೌಡರ ರಂಗ ಮಂದಿರದಲ್ಲಿ ಜ.4 ಮತ್ತು 5 ರಂದು ಜಿಲ್ಲಾ ಕಲಾ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹೇಳಿದರು.
ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ಜಿಲ್ಲೆಯ ಎಲ್ಲ ಕಲಾವಿದರನ್ನು ಒಗ್ಗೂಡಿಸುವುದು ಕಲಾ ವೈಭವದ ಉದ್ದೇಶವಾಗಿದೆ’ ಎಂದರು.
ಜ.4 ರಂದು ಬೆಳಗ್ಗೆ 9 ಗಂಟೆಗೆ ನಗರದ ರಾಘವ ಕಲಾಮಂದಿರದ ಬಳಿಯಿಂದ ವಸಂತ ವೈಭವ ಎನ್ನುವ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಪ್ರಥಮ ದರ್ಜೆ ಗುತ್ತಿಗೆದಾರ ಮಸೀದಿಪುರ ಸಿದ್ಧರಾಮನಗೌಡ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯೂ ರಾಘವ ಕಲಾಮಂದಿರದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಎಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ. ಛದ್ಮವೇಷ, ಬಯಲಾಟ ವೇಷ, ಎತ್ತಿನಬಂಡಿ ಮೆರವಣಿಗೆ, ತಾಷಾರಾಂ ಡೋಲ್, ತೊಗಲುಗೊಂಬೆ ಸೇರಿ 30 ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ’ ಎಂದು ಅವರು ತಿಳಿಸಿದರು.
ಎಮ್ಮಿಗನೂರು ಹಂಪಿ ಸಾವಿರ ದೇವರಮಠದ ಶ್ರೀವಾಮದೇವ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಂಸದ ಈ. ತುಕಾರಂ ಉದ್ಘಾಟಿಸುವರು. ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಭಾಗವಹಿಸುವರು. ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಜಿಲ್ಲಾ ಕಲಾವಿದರ ಸಂಘದ ಉಪಾಧ್ಯಕ್ಷೆ ವೀಣಾ ಕುಮಾರಿ, ಕಾರ್ಯದರ್ಶಿ ಎಚ್.ತಿಪ್ಪೇಸ್ವಾಮಿ, ಖಜಾಂಚಿ ರಮಣಪ್ಪ ಭಜಂತ್ರಿ, ಜಂಟಿ ಕಾರ್ಯದರ್ಶಿ ವೀರೇಶ್ ದಳವಾಯಿ, ಸುಬ್ಬಣ್ಣ, ಸದಸ್ಯ ಎಂ.ವಿನೋದ್ ಸೇರಿ ಹಲವು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು