9:14 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್‌ ಅಪಹರಣ; 6 ಕೋಟಿ ರೂ. ಹಣದ ಬೇಡಿಕೆ 

25/01/2025, 15:58

ಬಳ್ಳಾರಿ(reporterkarnataka.com): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಅವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ವೇಳೆಗೆ ಅಪಹರಿಸಿದ್ದು, ಭಾರೀ ಹಣದ ಬೇಡಿಕೆ ಇಟ್ಟಿದ್ದಾರೆ.
ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 6 ಕೋಟಿ ರೂ. ನಗದು ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ. 
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ. 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು