2:22 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್‌ ಅಪಹರಣ; 6 ಕೋಟಿ ರೂ. ಹಣದ ಬೇಡಿಕೆ 

25/01/2025, 15:58

ಬಳ್ಳಾರಿ(reporterkarnataka.com): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಅವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ವೇಳೆಗೆ ಅಪಹರಿಸಿದ್ದು, ಭಾರೀ ಹಣದ ಬೇಡಿಕೆ ಇಟ್ಟಿದ್ದಾರೆ.
ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 6 ಕೋಟಿ ರೂ. ನಗದು ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ. 
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ. 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು