9:35 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಬಳ್ಳಾರಿ: ಶೃಂಗೇರಿ ಜಗದ್ಗುರುಗಳ ಆಗಮನ; ವಿವಿಧ ಸಮಿತಿಗಳ ಸಿದ್ಧತೆ

16/01/2025, 00:11

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇದೇ ಜ.19, 20 ಮತ್ತು 21 ರಂದು ಸಂಗನಕಲ್ಲು ರಸ್ತೆಯ ಶ್ರೀ ಶೃಂಗೇರಿ ಶಾರದಾ ಶಂಕರ ಮಠದಲ್ಲಿ ಭಾರತೀತೀರ್ಥ ಸಭಾ ಭವನ ಉದ್ಘಾಟನೆ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಶೃಂಗೇರಿ ಜಗದ್ಗುರುಗಳು ಬಳ್ಳಾರಿಗೆ ಆಗಮಿಸಲಿದ್ದು ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಸಂಗನಕಲ್ಲು ರಸ್ತೆಯ ಶೃಂಗೇರಿ ಶಾರದಾ ಶಂಕರ ಮಠದ ಸಂಚಾಲಕರಾದ ಬಿ.ಕೆ.ಬಿ.ಎನ್.ಮೂರ್ತಿ ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ವಿವಿಧ ಸಮಿತಿಗಳ ರೂವಾರಿಗಳು ತಾವು ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸಾಧಕ, ಬಾಧಕಗಳನ್ನು ಸಭೆಯ ಗಮನಕ್ಕೆ ತಂದರು.
ಹಿರಿಯ ವಕೀಲರಾದ ವೈ.ರಂಗನಾಥ ರಾವ್ ಅವರು ಮಾತನಾಡಿ ಕಿರ್ಲೋಸ್ಕರ್, ಜಿಂದಾಲ್ ಸೇರಿದಂತೆ ಹಲವು ಉದ್ಯಮಗಳು ಮತ್ತು ಕೈಗಾರಿಕೆಗಳ ವ್ಯವಸ್ಥಾಪಕ ನಿರ್ದೇಶಕರುಗಳು ಮತ್ತು ಗಣ್ಯಮಾನ್ಯರು ಶೃಂಗೇರಿ ಜಗದ್ಗುರುಗಳ ದರ್ಶನಕ್ಕೆ ಬರಲಿದ್ದು ಸಮಿತಿಯು ಸಮಯ ಪಾಲನೆಯ ಜೊತೆಗೆ ಶ್ರೀಗಳ ಭೇಟಿಗೆ ಅನುವು ಮಾಡಿಕೊಡಬೇಕು ಎಂದರು.
ವಕೀಲರಾದ ಮೃತ್ಯುಂಜಯ ಬಂಡ್ರಾಳ್ ಅವರು ಮಾತನಾಡಿ, ಮಠಕ್ಕೆ ಬರುವ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರುಗಳ ಪಾರ್ಕಿಂಗ್ ಮತ್ತು ಮೋಟಾರ್ ಬೈಕ್ ಗಳ ಪಾರ್ಕಿಂಗ್ ಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಕಾಶ್ ರಾವ್ ಗಡೇಕಲ್ ಅವರು ಭೋಜನ ಸಮಿತಿಯ ನಿರ್ವಹಣೆ ಮಾಡುತ್ತಿದ್ದು 3 ದಿನ ನಡೆಯುವ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರಕ್ಕೂ ಅಧಿಕ ಜನರು ಬರುವ ನಿರೀಕ್ಷೆ ಇದೆ. ಭೋಜನಾಲಯದಲ್ಲಿ ಅಗತ್ಯ ಸಿದ್ಧತೆ ಕೈಗೊಂಡಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಅರುಣಾ ಮಂಜು, ಮಠದ ಆವರಣವೆಲ್ಲ ವಿದ್ಯುತ್ ಅಲಂಕಾರ, ನಾಲ್ಕು ಬೃಹತ್ ಎಲ್.ಇ.ಡಿ.ಗಳ ಅಳವಡಿಕೆ ಜೊತೆಗೆ ಸಮಾರಂಭದ ವೇದಿಕೆಯ ಸೌಂಡ್ ಸಿಸ್ಟಮ್ ನಿರ್ವಹಣೆ ಮಾಡುವ ಬಗ್ಗೆ ಮಾಹಿತಿ ನೀಡಿದರು.
ಮಹಾನಗರ ಪಾಲಿಕೆ ಸದಸ್ಯ ಕೆ.ಎಸ್.ಅಶೋಕ್ ಅವರು ಮಾತನಾಡಿ, ಗುರುಗಳ ಶೋಭಾ ಯಾತ್ರೆಯ ವೇಳೆ ಪಾಲ್ಗೊಳ್ಳುವ ಎಲ್ಲ ಭಕ್ತರಿಗೆ ಕೆಆರ್‌ಎಸ್ ಫಂಕ್ಷನ್ ಹಾಲ್ ನಿಂದ ಮಠದವರೆಗೆ ನಿರ್ವಹಣೆ, ಮಠದ ಆವರಣದಲ್ಲಿ ಸ್ವಚ್ಛತೆ ಇತ್ಯಾದಿ ಸೇವೆ ಸಲ್ಲಿಸುವ ಕುರಿತು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಶ್ರೀಮಠದ ಪದಾಧಿಕಾರಿಗಳಾದ ಜೆ.ಮೋಹನ್ ಶಾಸ್ತ್ರಿ,
ಕೆ.ರವಿ ಶಾಸ್ತ್ರಿ, ವಿ.ಮುರಳಿ, ರಘುನಂದನ್, ಶ್ರೀಧರ್, ರಘುನಾಥರಾವ್, ನಾಗರಾಜ್, ಹರಿಪ್ರಸಾದ್, ನಟರಾಜ್, ವಿಜಯಲಕ್ಷ್ಮಿ ಕರೂರು ಸೇರಿದಂತೆ ಹಲವು ಭಕ್ತಾದಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು