2:28 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು