7:34 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು