6:49 AM Monday29 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು