6:56 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು