9:14 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು