2:49 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು