12:16 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು