9:31 PM Monday20 - January 2025
ಬ್ರೇಕಿಂಗ್ ನ್ಯೂಸ್
ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ.… ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಬಳ್ಳಾರಿ: ‘ಸ್ಟೀಲ್ ಸಿಟಿ ರನ್’ ನಲ್ಲಿ 4 ಸಾವಿರ ಜನರು ಭಾಗಿ; 10 ಕಿಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಪ್ರಥಮ

04/08/2024, 21:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com
ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಆಯೋಜಿಸಿದ್ದ ‘ಸ್ಟೀಲ್ ಸಿಟಿ ರನ್’ ಓಟದಲ್ಲಿ ಭಾರತದ ವಿವಿಧ 11 ರಾಜ್ಯಗಳ 4 ಸಾವಿರಕ್ಕೂ ಜನರು ಭಾಗವಹಿಸಿದ್ದರು.
10 ಕಿ.ಮೀ. ನಲ್ಲಿ ಮಹಾರಾಷ್ಟ್ರದ ರಾಹುಲ್ ಸಂಘೀ ಹಾಗೂ 5 ಕಿ.ಮೀ.ನಲ್ಲಿ ಬೆಳಗಾವಿಯ ಶಿವಾನಂದ ಲಕ್ಷ್ಮಣ ಶಿಗಾರೆ ಅವರು ಅತಿ ವೇಗದ ಓಟಗಾರರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದವರಿಗೆ 5, ದ್ವಿತೀಯ ಸ್ಥಾನ ಪಡೆದವರಿಗೆ 3 ಮತ್ತು ತೃತೀಯ ಸ್ಥಾನ ಪಡೆದವರಿಗೆ 2 ಸಾವಿರ ರೂ ಬಹುಮಾನವನ್ನು ಶಾಸಕ ಭರತ್ ರೆಡ್ಡಿ, ಎಸ್ಪಿ ಡಾ.ಶೋಭಾರಾಣಿ ನೀಡಿದರು.
ಮಹಿಳಾ ವಿಭಾಗದ ವಿಜೇತರಿಗೆ ಡಾ.ಸೋಮನಾಥ, ಮಂಜು ಮೋದಿ ಅವರು ಬಹುಮಾನ ವಿತರಿಸಿದರು. 10 ಕಿ.ಮೀ. ಓಟದಲ್ಲಿ 5ಕ್ಕೂ ಹೆಚ್ಚು ಜನ, 5 ಕಿಲೋ ಮೀಟರ್ ಓಟದಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಹಾಗು 3 ಕಿ.ಮೀ ಓಟದಲ್ಲಿ 350ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಶೇ. 30ಕ್ಕೂ ಹೆಚ್ಚು ಮಹಿಳೆಯರು, ಬಾಲಕಿಯರು ಭಾಗವಹಿಸಿದ್ದರು.
ಇದರಲ್ಲಿ ಮಹಾರಾಷ್ಟ್ರ, ಆಂಧ್ರ
ಪ್ರದೇಶ, ತೆಲಂಗಾಣ, ತಮಿಳುನಾಡು ಮೊದಲಾದ 11 ರಾಜ್ಯಗಳ ಹಾಗೂ ಕಿನ್ಯಾ ದೇಶದ ಓರ್ವ ಓಟಗಾರ ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಜನರು ಆರೋಗ್ಯದಿಂದ ಇರಲು ದಿನ ನಿತ್ಯ ಒಂದಿಷ್ಟು ಓಟದ ಅಭ್ಯಾಸದ ಬಗ್ಗೆ ಜಾಗೃತಿ ಮೂಡಿಸಲು ಈ ಓಟವನ್ನು ಆಯೋಜಿಸಿತ್ತು.
ಇದು 3ನೇ ವರ್ಷದ ಓಟವಾಗಿದೆ.
ಬೆಳಗ್ಗೆ ಓಟಕ್ಕೆ ತೋರಣಗಲ್ಲಿ ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಮುರುಗನ್, ಎಸ್ಪಿ ಡಾ.ಶೋಭಾರಾಣಿ, ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಮೊದಲಾದವರು ಚಾಲನೆ ನೀಡಿದರು. ಸೈಕ್ಲಿಂಗ್ ಕ್ಲಬ್ ನ ಅಧ್ಯಕ್ಷ ಡಾ.ರವಿಶಂಕರ್, ಡಾ.ಸುಂದರ್, ಡಾ.ಸೋಮನಾಥ, ಮೊದಲಾದವರು ಪಾಲ್ಗೊಂಡಿದ್ದರು. ಓಟಗಾರರಿಗೆ ನೀರು, ಆರೋಗ್ಯ ಪರೀಕ್ಷೆ ಉಪಹಾರ ಮೊದಲಾದ ವ್ಯವಸ್ಥೆ ಮಾಡಲಾಗಿತ್ತು.
ಮೈಂಡ್ ಟ್ರೀಯ ಸಹ ಸಂಸ್ಥಾಪಕ ನಾಮಕಲ್ ಪಾರ್ಥಸಾರಥಿ, ವಿಶ್ವದ ಆರು ಮ್ಯಾರಥಾನಗಳಲ್ಲಿ ಭಾಗವಹಿಸಿ ಐದರಲ್ಲಿ ಜಯಿಸಿರುವ ಮೂರ್ತಿ ಆರ್.ಕೆ, ವೇಗದ ಓಟಗಾತಿ ಅನುಷಾ ಪಾಠಕ್ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು