9:01 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ

18/11/2023, 17:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ವೇದಿಕೆಯ ಅಧ್ಯಕ್ಷ ಸೋಮೇಶ್ ಮರ್ಕಲ್ ಹೇಳಿದರು.

ಅವರು ಬಾಳೂರಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವದು, ಚೀನಾದ ಹ್ಯಾಂಗ್ ಝ್ ನಲ್ಲಿ ಏಷ್ಯನ್ ಪ್ಯಾರಾಲಂಪಿಕ್ ಕ್ರೀಡಾಕೂಟದಲ್ಲಿ ಬಾಳೂರು ಗ್ರಾಮದ ಹೆಸರನ್ನು ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿದ ಸ್ಥಳೀಯ ಕ್ರೀಡಾಪಟು ರಕ್ಷಿತಾರಾಜು ಹಾಗೂ ಅವರ ಕೋಚ್ ರಾಹುಲ್ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು. ನಂತರ ಬಾಳೂರು ಹೋಬಳಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಗುವುದು. ಇದೇ ತಿಂಗಳ 20ರಂದು ಬೆಳಗ್ಗೆ 10 ಗಂಟೆಗೆ ರಕ್ಷಿತಾರಾಜು ಅವರನ್ನು ಕಲ್ಲಕ್ಕಿ ಸರ್ಕಾರಿ ಶಾಲೆಯಿಂದ ಬಾಳೂರು ದರ್ಬಾರ್ ಪೇಟೆವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ 11 ಗಂಟೆಗೆ ದರ್ಬಾರ್ ಪೇಟೆ ಅಂಗನವಾಡಿ ಬಳಿ ಸಭಾ ಕಾರ್ಯಕ್ರಮವನ್ನು ಶಾಸಕರಾದ ನಯನಾ ಮೋಟಮ್ಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್, ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಕ್ರೀಡಾ ಸಾಧಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು