4:08 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಬಾಲ್ಯ ವಿವಾಹ ತಡೆಗೆ ಹೋರಾಟವನ್ನೇ ನಡೆಸುತ್ತಿರುವ ದಕ್ಷ ಅಧಿಕಾರಿಯಾದ ಶರಣಮ್ಮ ಕರ್ನೂರ್

12/06/2021, 06:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವುದರ ಜೊತೆಗೆ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಮ್ಮ ಕರ್ನೂರ್  ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಕಳೆದ ವರ್ಷಗಳಿಂದ ಲಿಂಗ್ಸುರ್ ತಾಲೂಕಿನಲ್ಲಿ ಬಾಲ್ಯ ವಿವಾಹ ಪದ್ಧತಿಯನ್ನು ತಡೆಯಲು ಹೋರಾಟವನ್ನೇ ನಡೆಸಿಕೊಂಡು ಬಂದಿದ್ದಾರೆ. ಶಿಶು ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷತೆಯಲ್ಲಿ 54 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಕೆಸರಟ್ಟಿ ಮಿಂಚೇರಿ ತಾಂಡ, ನೀರಲಕೇರಿಯಲ್ಲಿ ಎರಡು ಪ್ರಕರಣಗಳು ಬಾಲ್ಯವಿವಾಹ ಕಾಯ್ದೆಡಿಯಲ್ಲಿ ದಾಖಲಾಗಿದೆ.  

ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ತಡೆಯಲು ತಾಲೂಕು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. 1098 ಸಹಾಯವಾಣಿ ಕರೆ ಮಾಡಿ ಮಾಹಿತಿ ತಿಳಿಸಬೇಕು. ಮಾಹಿತಿ ನೀಡಿ ವ್ಯಕ್ತಿಯ ಹೆಸರು ಗೋಪ್ಯವಾಗಿ ಇಡಲಾಗುವುದು. ಒಟ್ಟಿನಲ್ಲಿ ಸಾರ್ವಜನಿಕರು ಬಾಲ್ಯ ವಿವಾಹ ನಡೆಯದಂತೆ

ಸಹಕರಿಸಬೇಕು. ಎಲ್ಲರೂ ಧೈರ್ಯವಾಗಿ ಮುಂದೆ ಬರಬೇಕು ಎಂದು ಶರಣಮ್ಮ ಕರ್ನೂರ್ ತಿಳಿಸಿದ್ದಾರೆ.

ಇಂಥ ಪ್ರಕರಣಗಳು ಈಗಾಗಲೇ ಮಹಿಳಾ ಮಕ್ಕಳ ಇಲಾಖೆಯ ಅಧಿಕಾರಿಗಳ ಪ್ರಾಣಕ್ಕೆ ಅಪಾಯ ತಂದಿದೆ. ಲಿಂಗಸ್ಗೂರು ಶಿಶು ಅಭಿವೃದ್ಧಿ ಇಲಾಖೆಯಲ್ಲಿ  ಕೆಲಸ ಮಾಡಿದ ಯೋಗಿತಾ ಬಾಯಿ ಅವರ ಮೇಲೆ ಹಲ್ಲೆ ಕೂಡ ನಡೆದಿದೆ.

ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಯೋಜನೆಯೊಂದಿಗೆ ಕೈ ಜೋಡಿಸಿ ಬಾಲ್ಯ ವಿವಾಹ ತಡೆಯಲು ಮುಂದಾಗಬೇಕು ಎಂದು ಶರಣಮ್ಮ ಕರ್ನೂಲ್  ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು