12:24 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಾಲ್ಯ ವಿವಾಹ ತಡೆಗೆ ಹೋರಾಟವನ್ನೇ ನಡೆಸುತ್ತಿರುವ ದಕ್ಷ ಅಧಿಕಾರಿಯಾದ ಶರಣಮ್ಮ ಕರ್ನೂರ್

12/06/2021, 06:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವುದರ ಜೊತೆಗೆ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಮ್ಮ ಕರ್ನೂರ್  ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಕಳೆದ ವರ್ಷಗಳಿಂದ ಲಿಂಗ್ಸುರ್ ತಾಲೂಕಿನಲ್ಲಿ ಬಾಲ್ಯ ವಿವಾಹ ಪದ್ಧತಿಯನ್ನು ತಡೆಯಲು ಹೋರಾಟವನ್ನೇ ನಡೆಸಿಕೊಂಡು ಬಂದಿದ್ದಾರೆ. ಶಿಶು ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷತೆಯಲ್ಲಿ 54 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಕೆಸರಟ್ಟಿ ಮಿಂಚೇರಿ ತಾಂಡ, ನೀರಲಕೇರಿಯಲ್ಲಿ ಎರಡು ಪ್ರಕರಣಗಳು ಬಾಲ್ಯವಿವಾಹ ಕಾಯ್ದೆಡಿಯಲ್ಲಿ ದಾಖಲಾಗಿದೆ.  

ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ತಡೆಯಲು ತಾಲೂಕು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. 1098 ಸಹಾಯವಾಣಿ ಕರೆ ಮಾಡಿ ಮಾಹಿತಿ ತಿಳಿಸಬೇಕು. ಮಾಹಿತಿ ನೀಡಿ ವ್ಯಕ್ತಿಯ ಹೆಸರು ಗೋಪ್ಯವಾಗಿ ಇಡಲಾಗುವುದು. ಒಟ್ಟಿನಲ್ಲಿ ಸಾರ್ವಜನಿಕರು ಬಾಲ್ಯ ವಿವಾಹ ನಡೆಯದಂತೆ

ಸಹಕರಿಸಬೇಕು. ಎಲ್ಲರೂ ಧೈರ್ಯವಾಗಿ ಮುಂದೆ ಬರಬೇಕು ಎಂದು ಶರಣಮ್ಮ ಕರ್ನೂರ್ ತಿಳಿಸಿದ್ದಾರೆ.

ಇಂಥ ಪ್ರಕರಣಗಳು ಈಗಾಗಲೇ ಮಹಿಳಾ ಮಕ್ಕಳ ಇಲಾಖೆಯ ಅಧಿಕಾರಿಗಳ ಪ್ರಾಣಕ್ಕೆ ಅಪಾಯ ತಂದಿದೆ. ಲಿಂಗಸ್ಗೂರು ಶಿಶು ಅಭಿವೃದ್ಧಿ ಇಲಾಖೆಯಲ್ಲಿ  ಕೆಲಸ ಮಾಡಿದ ಯೋಗಿತಾ ಬಾಯಿ ಅವರ ಮೇಲೆ ಹಲ್ಲೆ ಕೂಡ ನಡೆದಿದೆ.

ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಯೋಜನೆಯೊಂದಿಗೆ ಕೈ ಜೋಡಿಸಿ ಬಾಲ್ಯ ವಿವಾಹ ತಡೆಯಲು ಮುಂದಾಗಬೇಕು ಎಂದು ಶರಣಮ್ಮ ಕರ್ನೂಲ್  ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು