3:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಕ್ರಿಸ್ಮಸ್ ಅಂಗವಾಗಿ ಕ್ರೀಡಾಕೂಟ

16/12/2022, 23:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಿಂದ ದೇಹಕ್ಕೆ ವ್ಯಾಯಾಮ ಸಿಕ್ಕದಂತಾಗುತ್ತದೆ ಎಂದು ಬಣಕಲ್ ಬಾಲಿಕಾ ಮರಿಯ ಚರ್ಚ್ ಧರ್ಮಗುರುಗಳಾದ ಫಾ. ಪ್ರೇಮ್ ಲಾರೆನ್ಸ್ ಡಿಸೋಜ ಹೇಳಿದರು.

ಅವರು ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಜರೆತ್ ಶಾಲೆಯ ಮೈದಾನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು.ಕ್ರೀಡೆಯು ಮನೋರಂಜನೆಯ ಅವಿಭಾಜ್ಯ ಅಂಗವಾಗಿದೆ’ಎಂದರು.

ಕ್ರೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷ ಮೆಲ್ವಿನ್ ಹರ್ಷ ಲಸ್ರಾದೊ ಮಾತನಾಡಿ’ ಕ್ರೀಡೆಗಳು ಮನಸ್ಸಿನ ಏಕಾಗ್ರತೆ ಬಲಪಡಿಸುವುದಲ್ಲದೇ ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ’ ಎಂದರು.
ಸಹಾಯಕ ಧರ್ಮಗುರು ಫಾ.ತೋಮಸ್ ಕಲಘಟಗಿ, ನಜರೆತ್ ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೊ ಮಾತನಾಡಿದರು.ಮಕ್ಕಳು ಹಾಗೂ ಹಿರಿಯರಿಗೆ ವಿವಿಧ ಕ್ರೀಡೆಗಳು ನಡೆದವು.

ಎಲ್ ಕೆಜಿ ಹಾಗೂ ಯುಕೆಜಿ ವಿಭಾಗದ ಚೆಂಡು ನಡೆಸುವ ಸ್ಪರ್ಧೆಯಲ್ಲಿ ಅಹನಾ ಪ್ರಥಮ,ಆನ್ವಿ ದ್ವಿತೀಯ,ರೋಯಿಸ್ಟನ್ ತೃತೀಯ ಸ್ಥಾನ ಪಡೆದರು.ಒಂದು ಮತ್ತು ಎರಡನೆ ತರಗತಿಯ ವಿದ್ಯಾರ್ಥಿಗಳಿಗೆ ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಕ್ಯಾರೆನ್ ಪ್ರಥಮ,ಜೋಸ್ವಿನ್ ದ್ವಿತೀಯ ಹಾಗೂ ಜೋಯೆಲ್ ತೃತೀಯ ಸ್ಥಾನ ಪಡೆದರು.ಮೂರರಿಂದ ಐದನೇ ತರಗತಿ ವಿಭಾಗದ ಬೆಲೂನ್ ಸ್ಪೋಟಿಸುವ ಸ್ಪರ್ಧೆಯಲ್ಲಿ ಜೋವಿಲ್ ಪ್ರಥಮ,ಜೇಸ್ ದ್ವಿತೀಯ ಹಾಗೂ ಅವಿನ್ ತೃತೀಯ ಸ್ಥಾನ ಪಡೆದರು.
ಆರನೇ ಹಾಗೂ ಏಳನೇ ತರಗತಿ ವಿಭಾಗದ 100ಮೀ ಓಟದಲ್ಲಿ ಸ್ಟೀವನ್ ಪ್ರಥಮ,ಆಲೆನ್ ದ್ವಿತೀಯ, ಧೀಕ್ಷಿತ್ ತೃತೀಯ ಸ್ಥಾನ ಪಡೆದರು.ಎಂಟರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಚಮಚದಲ್ಲಿ ನಿಂಬೆಹಣ್ಣು,ಗೋಲಿ ಓಟದ ಸ್ಪರ್ಧೆಯಲ್ಲಿ ಪ್ರಜ್ವಲ್ ಪ್ರಥಮ,ಪ್ರಿನ್ಸಿಯ ದ್ವಿತೀಯ ಸ್ಥಾನ ಪಡೆದರು.

ಗೋಣಿ ಚೀಲ ಓಟದಲ್ಲಿ ಸಿಸ್ಟರ್ ರೋಶನಿ ಪ್ರಥಮ ಹಾಗೂ ಡೈನಾ ಡಿಸೋಜ ದ್ವಿತೀಯ ಸ್ಥಾನ ಪಡೆದರು. ಪುರುಷರ 100*4 ರಿಲೆ ಓಟದಲ್ಲಿ ರೋಷನ್,ಸ್ಟೀವನ್,ಆಲೆನ್,ಅರುಣ್ ತಂಡ ಪ್ರಥಮ ಸ್ಥಾನ ಪಡೆದರೆ,ಮಹಿಳೆಯರ ರಿಲೇ ವಿಭಾಗದಲ್ಲಿ ಜೆನ್ನಿಫರ್,ಅನಿಶಾ,ದಿಲ್ಸಿನ್,ವಿನೀತ ಪ್ರಥಮ ಸ್ಥಾನ ಪಡೆದರು.ಹಗ್ಗ ಜಗ್ಗಾಟದ ಮಹಿಳೆಯರ ವಿಭಾಗದಲ್ಲಿ ಮರೀನಾ,ಶೀಲಾ,ವಿಕ್ಟೋರಿಯ,ಜೋಯ್ಲಿನ್,ಗ್ಲೆನ್ನಾ,ಅನಿತ,ಸುನೀತ,ಸುಚಿತ್ರ,ಮಾರ್ಗರೇಟ್,ಸಿಸ್ಟರ್ ಹಿಲ್ಡಾ ಲೋಬೊ,ಡೈನಾ,ದುಲ್ಸಿನ್,ಅರ್ಪಿತಾ,ವಿನೀತ,ರೀನಾ ಹಾಗೂ ಲೀನಾ ತಂಡ ಪ್ರಥಮ,ಪುರುಷರ ಸ್ಪರ್ಧೆಯಲ್ಲಿ ರೋನಿ ಮೋನಿಸ್,ಮೆಲ್ವಿನ್,ಹಿಲರಿ,ರೋಶನ್,ಅರುಣ್ ರೊಡ್ರಿಗಸ್,ವಿನ್ಸಿ,ವಲೇರಿಯನ್,ನವೀನ್ ಪ್ರಾನ್ಸಿಸ್ ಅವರ ತಂಡ ವಿಜೇತರಾದರು.ಪುರುಷರ ವಾಲಿಬಾಲ್ ಸ್ಪರ್ಧೆಯಲ್ಲಿ ರೋನಿ,ನವೀನ್,ಪ್ರಾನ್ಸಿಸ್,ಆಸ್ಟಿನ್,ನವೀನ್ ,ಪ್ರಕಾಶ್,ರುಡಾಲ್ಫ್ ತಂಡ ಪ್ರಥಮ ಸ್ಥಾನ ಪಡೆದರೆ,ಮಹಿಳೆಯರ ಥ್ರೋ ವಾಲಿಬಾಲ್ ಸ್ಪರ್ಧೆಯಲ್ಲಿ ಮರೀನಾ,ಶೀಲಾ,ವಿಕ್ಟೋರಿಯ, ಎಡ್ನಾ,ಜೋಯ್ಲಿನ್, ಗ್ಲೆನ್ನಾ,ಅನಿತಾ,ಸುನೀತ,ಸುಚಿತ್ರ ಅವರ ತಂಡ ಪ್ರಥಮ ಪ್ರಶಸ್ತಿ ಪಡೆಯಿತು.ಮಹಿಳೆಯರ ಗೋಣಿ ಚೀಲ ಓಟ ಸಿಸ್ಟರ್ ರೋಶನಿ ಪ್ರಥಮ,ಎಲೀಶಾ ಧ್ವಿತೀಯ ಹಾಗೂ ಪ್ರಶಾಂತಿ ತೃತೀಯ ಸ್ಥಾನ ಪಡೆದರು.ಗುಂಡು ಎಸೆತ ಪ್ರಾನ್ಸಿಸ್ ಪ್ರಥಮ ಸ್ಥಾನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು