4:01 PM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿ ಕಸಾಪ ಪದಗ್ರಹಣ; ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲ: ಸೂರಿ ಶ್ರೀನಿವಾಸ್

22/09/2024, 23:32

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಕಸಾಪದ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಪ್ರತಿ ಜಿಲ್ಲೆ, ತಾಲ್ಲೂಕು ಹಾಗೂ ಪ್ರತಿ ಗ್ರಾಮಗಳಲ್ಲಿ ನುಡಿ ನಿತ್ಯೋತ್ಸವ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿದೆ’ಎಂದರು. ಯುರೇಕಾ ಆಕಾಡೇಮಿಯ ಅಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ’ಯಾವುದೇ ಕೆಲಸವನ್ನು ನಾಯಕನ ಜತೆಗೆ ತಂಡವಾಗಿ ಕೆಲಸ ನಿರ್ವಹಿಸಿದರೆ ಎಲ್ಲವೂ ಕೆಲಸಗಳು ಸುಲಭದಲ್ಲಿ ನಿರ್ವಹಿಸಬಹುದು’ಎಂದು ಹೇಳಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ ಮಾತನಾಡಿ’ಬಣಕಲ್ ನಲ್ಲಿ ಕಸಾಪದ ತಿಂಗಳ ಸಾಹಿತ್ಯ ಬೆಳೆಯಬೇಕಾದರೆ ಮೋಹನ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ದೀಪಕ್ ದೊಡ್ಡಯ್ಯ,ಮಗ್ಗಲಮಕ್ಕಿ ಗಣೇಶ್ ಸೇರಿದಂತೆ ಹಲವರ ಪರಿಶ್ರಮ ಅಪಾರವಾಗಿದೆ ಎಂದು ಸ್ಮರಿಸಿದರು. ಸ್ಥಾಪಕ ಅಧ್ಯಕ್ಷ ಪೂರ್ವಾಧ್ಯಕ್ಷ ಸುರೇಶ್ ಎಸ್.ಶೆಟ್ಟಿ, ಟಿ.ಎಂ.ಆದರ್ಶ್,ಮುಖ್ಯ ಶಿಕ್ಷಕ ಜಿ.ಎಚ್.ಶ್ರೀನಿವಾಸ್,ಮಗ್ಗಲಮಕ್ಕಿಗಣೇಶ್,ಶಾಂತಕುಮಾರ್,
ಟಿ.ಎಂ.ಗಜೇಂದ್ರ,ಎಲ್.ಬಿ.ರಮೇಶ್,ಬಿ.ಕೆ.ದಿನೇಶ್,ಝರೀನಾ,ಬಿ.ಶಿವರಾಮ ಶೆಟ್ಟಿ,ಬಿ.ಎಂ.ಶಂಕರ್,ಎಲ್.ಬಿ.ಲೋಕೇಶ್ ಮಾತನಾಡಿದರು.

ಬಿ.ಕೆ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಟಿ.ಎಂ.ಆದರ್ಶ್ ಅವರು ನೂತನ ಅಧ್ಯಕ್ಷ ಬಿ.ಕೆ. ಲೋಕೇಶ್ ಅವರಿಗೆ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅನಿತಾ ಜಗದೀಪ್, ವಿಶಾಲನಾಗರಾಜ್, ಭಕ್ತೇಶ್, ವಸಂತ್ ಹಾರ್ಗೋಡು, ಸಂಪತ್ ಬೆಟ್ಟಗೆರೆ , ನಾಟ್ಯರಂಜಿತ್, ಸಂಜಯ್ ಗೌಡ,ಸ್ವಾತಿ ನವೀನ್, ಆರೀಫ್, ಹೊರಟ್ಟಿ ರಘು, ಸಂಜಯ್ ಗೌಡ,ಬಕ್ಕಿ ಮಂಜುನಾಥ್,ರಾಮಚಂದ್ರ,ಬಿ.ಎಸ್.ವಿಕ್ರಂ,ಬಿ.ಕೆ.ದಿನೇಶ್,ಯತೀಶ್ ಕುಮಾರ್, ಶರತ್ ಫಲ್ಗುಣಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು