8:31 PM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿ ಕಸಾಪ ಪದಗ್ರಹಣ; ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲ: ಸೂರಿ ಶ್ರೀನಿವಾಸ್

22/09/2024, 23:32

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಕಸಾಪದ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಪ್ರತಿ ಜಿಲ್ಲೆ, ತಾಲ್ಲೂಕು ಹಾಗೂ ಪ್ರತಿ ಗ್ರಾಮಗಳಲ್ಲಿ ನುಡಿ ನಿತ್ಯೋತ್ಸವ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿದೆ’ಎಂದರು. ಯುರೇಕಾ ಆಕಾಡೇಮಿಯ ಅಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ’ಯಾವುದೇ ಕೆಲಸವನ್ನು ನಾಯಕನ ಜತೆಗೆ ತಂಡವಾಗಿ ಕೆಲಸ ನಿರ್ವಹಿಸಿದರೆ ಎಲ್ಲವೂ ಕೆಲಸಗಳು ಸುಲಭದಲ್ಲಿ ನಿರ್ವಹಿಸಬಹುದು’ಎಂದು ಹೇಳಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ ಮಾತನಾಡಿ’ಬಣಕಲ್ ನಲ್ಲಿ ಕಸಾಪದ ತಿಂಗಳ ಸಾಹಿತ್ಯ ಬೆಳೆಯಬೇಕಾದರೆ ಮೋಹನ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ ದೀಪಕ್ ದೊಡ್ಡಯ್ಯ,ಮಗ್ಗಲಮಕ್ಕಿ ಗಣೇಶ್ ಸೇರಿದಂತೆ ಹಲವರ ಪರಿಶ್ರಮ ಅಪಾರವಾಗಿದೆ ಎಂದು ಸ್ಮರಿಸಿದರು. ಸ್ಥಾಪಕ ಅಧ್ಯಕ್ಷ ಪೂರ್ವಾಧ್ಯಕ್ಷ ಸುರೇಶ್ ಎಸ್.ಶೆಟ್ಟಿ, ಟಿ.ಎಂ.ಆದರ್ಶ್,ಮುಖ್ಯ ಶಿಕ್ಷಕ ಜಿ.ಎಚ್.ಶ್ರೀನಿವಾಸ್,ಮಗ್ಗಲಮಕ್ಕಿಗಣೇಶ್,ಶಾಂತಕುಮಾರ್,
ಟಿ.ಎಂ.ಗಜೇಂದ್ರ,ಎಲ್.ಬಿ.ರಮೇಶ್,ಬಿ.ಕೆ.ದಿನೇಶ್,ಝರೀನಾ,ಬಿ.ಶಿವರಾಮ ಶೆಟ್ಟಿ,ಬಿ.ಎಂ.ಶಂಕರ್,ಎಲ್.ಬಿ.ಲೋಕೇಶ್ ಮಾತನಾಡಿದರು.

ಬಿ.ಕೆ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಟಿ.ಎಂ.ಆದರ್ಶ್ ಅವರು ನೂತನ ಅಧ್ಯಕ್ಷ ಬಿ.ಕೆ. ಲೋಕೇಶ್ ಅವರಿಗೆ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅನಿತಾ ಜಗದೀಪ್, ವಿಶಾಲನಾಗರಾಜ್, ಭಕ್ತೇಶ್, ವಸಂತ್ ಹಾರ್ಗೋಡು, ಸಂಪತ್ ಬೆಟ್ಟಗೆರೆ , ನಾಟ್ಯರಂಜಿತ್, ಸಂಜಯ್ ಗೌಡ,ಸ್ವಾತಿ ನವೀನ್, ಆರೀಫ್, ಹೊರಟ್ಟಿ ರಘು, ಸಂಜಯ್ ಗೌಡ,ಬಕ್ಕಿ ಮಂಜುನಾಥ್,ರಾಮಚಂದ್ರ,ಬಿ.ಎಸ್.ವಿಕ್ರಂ,ಬಿ.ಕೆ.ದಿನೇಶ್,ಯತೀಶ್ ಕುಮಾರ್, ಶರತ್ ಫಲ್ಗುಣಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು