1:27 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಣಕಲ್ : ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ; ರೈತರ ಮನೆ ಬಾಗಿಲಿಗೆ ಕೃಷಿ ಸೌಲಭ್ಯ

31/05/2022, 08:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಬಣಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ (ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು) ಮಾತನಾಡಿ, ಕೃಷಿ ಇಲಾಖೆಯು ರೈತರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಪ್ರತಿಯೊಬ್ಬ ರೈತರು ಇದರ ಸದುಪಯೋಗ ಪಡಿಸಿಕೊಂಡು ಕೃಷಿಯಲ್ಲಿ ಸ್ವಾವಲಂಬಿಯಾಗಿ ಬದುಕಬೇಕೆಂದು ಹೇಳಿದರು. 

ಪಿ.ಕೆ ನಾಗೇಶ್ (ಕಾರ್ಯದರ್ಶಿಗಳು ಕೃಷಿಕ ಸಮಾಜ ಮೂಡಿಗೆರೆ) ಅವರು ಮಾತನಾಡಿ, ರೈತರು ಅತಿ ಕಷ್ಟವನ್ನು ಅನುಭವಿಸುತ್ತಿದ್ದು ಇಂಥ ಒಂದು ಕಷ್ಟವನ್ನು ಸರ್ಕಾರ ಹಾಗೂ ಇಲಾಖೆ ಅತ್ಯುನ್ನತ ಯೋಜನೆಗಳನ್ನು ರೂಪಿಸಿ ಬೆಂಬಲವನ್ನು ನೀಡಿ ರೈತರನ್ನು ಸ್ವಾವಲಂಬಿ ಹಾಗೂ ದೇಶದ ಅತ್ಯುನ್ನತ ಆರ್ಥಿಕತೆಯನ್ನು ಹೊಂದಲು ಸಹಾಯ ಮಾಡಬೇಕೆಂದು ತಿಳಿಸಿದರು.

ವನಶ್ರೀ ಲಕ್ಷ್ಮಣಗೌಡ (ರಾಜ್ಯ ಮಹಿಳಾ ರೈತ ಸಂಘದ ಉಪಾಧ್ಯಕ್ಷರು)  ಅವರು ಮಾತನಾಡಿ ದೇಶಕ್ಕೆ ಅನ್ನ ನೀಡುವ ರೈತರು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ ಆದರೂ ಸಹ ರೈತರು ಕೃಷಿಯನ್ನು ಬಿಡದೆ ಅದರಲ್ಲಿನ ಜೀವನವನ್ನು ಸಾಗಿಸುತ್ತಿದ್ದಾರೆ ಹಾಗೇನೆ ಪ್ರಕೃತಿ ವಿಕೋಪಗಳಿಂದ ರೈತರು ಹಲವಾರು ಪೆಟ್ಟುಗಳನ್ನು ತಿಂದಿದ್ದಾನೆ ಆದರೂ ಸಹ ರೈತನು ಕೃಷಿಯನ್ನು ಮುಂದುವರಿಸಿ ಇಡೀ ಜಗತ್ತಿಗೆ ಅನ್ನವನ್ನು ನೀಡುತ್ತಿದ್ದಾನೆ ಎಂದು ತಿಳಿಸಿದರು. 

ಗ್ರಾಮ ಪಂಚಾಯಿತಿ ಸದಸ್ಯರಾದ  ವಿನಯ್ ಕುಮಾರ್ ಕುಮಾರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿಗಳಾದ ಶ್ವೇತ,ಪ್ರದೀಪ್, ಗೋಪಾಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ  ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು