10:43 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಣಕಲ್ : ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ; ರೈತರ ಮನೆ ಬಾಗಿಲಿಗೆ ಕೃಷಿ ಸೌಲಭ್ಯ

31/05/2022, 08:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಬಣಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ (ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು) ಮಾತನಾಡಿ, ಕೃಷಿ ಇಲಾಖೆಯು ರೈತರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಪ್ರತಿಯೊಬ್ಬ ರೈತರು ಇದರ ಸದುಪಯೋಗ ಪಡಿಸಿಕೊಂಡು ಕೃಷಿಯಲ್ಲಿ ಸ್ವಾವಲಂಬಿಯಾಗಿ ಬದುಕಬೇಕೆಂದು ಹೇಳಿದರು. 

ಪಿ.ಕೆ ನಾಗೇಶ್ (ಕಾರ್ಯದರ್ಶಿಗಳು ಕೃಷಿಕ ಸಮಾಜ ಮೂಡಿಗೆರೆ) ಅವರು ಮಾತನಾಡಿ, ರೈತರು ಅತಿ ಕಷ್ಟವನ್ನು ಅನುಭವಿಸುತ್ತಿದ್ದು ಇಂಥ ಒಂದು ಕಷ್ಟವನ್ನು ಸರ್ಕಾರ ಹಾಗೂ ಇಲಾಖೆ ಅತ್ಯುನ್ನತ ಯೋಜನೆಗಳನ್ನು ರೂಪಿಸಿ ಬೆಂಬಲವನ್ನು ನೀಡಿ ರೈತರನ್ನು ಸ್ವಾವಲಂಬಿ ಹಾಗೂ ದೇಶದ ಅತ್ಯುನ್ನತ ಆರ್ಥಿಕತೆಯನ್ನು ಹೊಂದಲು ಸಹಾಯ ಮಾಡಬೇಕೆಂದು ತಿಳಿಸಿದರು.

ವನಶ್ರೀ ಲಕ್ಷ್ಮಣಗೌಡ (ರಾಜ್ಯ ಮಹಿಳಾ ರೈತ ಸಂಘದ ಉಪಾಧ್ಯಕ್ಷರು)  ಅವರು ಮಾತನಾಡಿ ದೇಶಕ್ಕೆ ಅನ್ನ ನೀಡುವ ರೈತರು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ ಆದರೂ ಸಹ ರೈತರು ಕೃಷಿಯನ್ನು ಬಿಡದೆ ಅದರಲ್ಲಿನ ಜೀವನವನ್ನು ಸಾಗಿಸುತ್ತಿದ್ದಾರೆ ಹಾಗೇನೆ ಪ್ರಕೃತಿ ವಿಕೋಪಗಳಿಂದ ರೈತರು ಹಲವಾರು ಪೆಟ್ಟುಗಳನ್ನು ತಿಂದಿದ್ದಾನೆ ಆದರೂ ಸಹ ರೈತನು ಕೃಷಿಯನ್ನು ಮುಂದುವರಿಸಿ ಇಡೀ ಜಗತ್ತಿಗೆ ಅನ್ನವನ್ನು ನೀಡುತ್ತಿದ್ದಾನೆ ಎಂದು ತಿಳಿಸಿದರು. 

ಗ್ರಾಮ ಪಂಚಾಯಿತಿ ಸದಸ್ಯರಾದ  ವಿನಯ್ ಕುಮಾರ್ ಕುಮಾರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿಗಳಾದ ಶ್ವೇತ,ಪ್ರದೀಪ್, ಗೋಪಾಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ  ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು