4:20 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬಣಕಲ್ : ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ; ರೈತರ ಮನೆ ಬಾಗಿಲಿಗೆ ಕೃಷಿ ಸೌಲಭ್ಯ

31/05/2022, 08:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಬಣಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ (ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು) ಮಾತನಾಡಿ, ಕೃಷಿ ಇಲಾಖೆಯು ರೈತರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಪ್ರತಿಯೊಬ್ಬ ರೈತರು ಇದರ ಸದುಪಯೋಗ ಪಡಿಸಿಕೊಂಡು ಕೃಷಿಯಲ್ಲಿ ಸ್ವಾವಲಂಬಿಯಾಗಿ ಬದುಕಬೇಕೆಂದು ಹೇಳಿದರು. 

ಪಿ.ಕೆ ನಾಗೇಶ್ (ಕಾರ್ಯದರ್ಶಿಗಳು ಕೃಷಿಕ ಸಮಾಜ ಮೂಡಿಗೆರೆ) ಅವರು ಮಾತನಾಡಿ, ರೈತರು ಅತಿ ಕಷ್ಟವನ್ನು ಅನುಭವಿಸುತ್ತಿದ್ದು ಇಂಥ ಒಂದು ಕಷ್ಟವನ್ನು ಸರ್ಕಾರ ಹಾಗೂ ಇಲಾಖೆ ಅತ್ಯುನ್ನತ ಯೋಜನೆಗಳನ್ನು ರೂಪಿಸಿ ಬೆಂಬಲವನ್ನು ನೀಡಿ ರೈತರನ್ನು ಸ್ವಾವಲಂಬಿ ಹಾಗೂ ದೇಶದ ಅತ್ಯುನ್ನತ ಆರ್ಥಿಕತೆಯನ್ನು ಹೊಂದಲು ಸಹಾಯ ಮಾಡಬೇಕೆಂದು ತಿಳಿಸಿದರು.

ವನಶ್ರೀ ಲಕ್ಷ್ಮಣಗೌಡ (ರಾಜ್ಯ ಮಹಿಳಾ ರೈತ ಸಂಘದ ಉಪಾಧ್ಯಕ್ಷರು)  ಅವರು ಮಾತನಾಡಿ ದೇಶಕ್ಕೆ ಅನ್ನ ನೀಡುವ ರೈತರು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ ಆದರೂ ಸಹ ರೈತರು ಕೃಷಿಯನ್ನು ಬಿಡದೆ ಅದರಲ್ಲಿನ ಜೀವನವನ್ನು ಸಾಗಿಸುತ್ತಿದ್ದಾರೆ ಹಾಗೇನೆ ಪ್ರಕೃತಿ ವಿಕೋಪಗಳಿಂದ ರೈತರು ಹಲವಾರು ಪೆಟ್ಟುಗಳನ್ನು ತಿಂದಿದ್ದಾನೆ ಆದರೂ ಸಹ ರೈತನು ಕೃಷಿಯನ್ನು ಮುಂದುವರಿಸಿ ಇಡೀ ಜಗತ್ತಿಗೆ ಅನ್ನವನ್ನು ನೀಡುತ್ತಿದ್ದಾನೆ ಎಂದು ತಿಳಿಸಿದರು. 

ಗ್ರಾಮ ಪಂಚಾಯಿತಿ ಸದಸ್ಯರಾದ  ವಿನಯ್ ಕುಮಾರ್ ಕುಮಾರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿಗಳಾದ ಶ್ವೇತ,ಪ್ರದೀಪ್, ಗೋಪಾಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ  ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು