12:10 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಬಾಣಂತಿಯರು, ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

13/12/2024, 18:26

* *ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಬಿಮ್ಸ್ ಗೆ ಭೇಟಿ ನೀಡಿದ ಸಚಿವರು*

* *ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಸಚಿದ್ವಯರು*

ಬೆಳಗಾವಿ(reporterkarnataka.com): ಬಾಣಂತಿ – ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗಿಂದು (ಬಿಮ್ಸ್) ಭೇಟಿ ನೀಡಿದ ಸಚಿವರು, ಈ ವೇಳೆ ವಿವಿಧ ಘಟಕಗಳಿಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ನೂತನ ಕಟ್ಟಡಕ್ಕೂ ಸಚಿವರು ಭೇಟಿ ನೀಡಿದರು.
ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕುಂದು‌ ಕೊರತೆಗಳ ಬಗ್ಗೆ ವಿಚಾರಿಸಿದರು. ಬಾಣಂತಿಯರು ಹಾಗೂ ಹಸಿಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು‌.
ಇದೇ ವೇಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನದ ನವಜಾತ ಹೆಣ್ಣು ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆರೂವರೆ ತಿಂಗಳ ಗರ್ಭಿಣಿ ಕಾಲು ಜಾರಿ ಬಿದ್ದಿದ್ದಾರೆ. ತೀವ್ರ ನೋವಿನ ಕಾರಣಕ್ಕೆ ಬೈಲಹೊಂಗಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್‌ಗೆ ಕರೆ ತರಲಾಗಿತ್ತು. ಮಗುವಿನ ಅಂಗಾಂಗ ಬೆಳವಣಿಗೆ ಆಗಿರಲಿಲ್ಲ, ಆದರೂ ಸಮರ್ಪಕ ಚಿಕಿತ್ಸೆ ನೀಡಲಾಗಿತ್ತು. ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ ಆಗಿದ್ದು ದುರ್ದೈವ. ಈಗಾಗಲೇ ಎಫ್ಐಆರ್ ದಾಖಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ರಾಜು ಸೇಠ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್, ಬಿಮ್ಸ್ ನಿರ್ದೇಶಕರಾದ ಅಶೋಕ್ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ್, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲಳ್ಳಿ, ಜಿಲ್ಲಾ ಸರ್ಜನ್ ಡಾ.ವಿಠಲ್ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಗಡಿ, ಡಾ.ಉಮೇಶ್ ಕುಲಕರ್ಣಿ ‌ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು