6:53 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ…

ಇತ್ತೀಚಿನ ಸುದ್ದಿ

ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅಮಾನತು

27/08/2024, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ಜಮೆಯಾಗಿರುವುದು ಪತ್ತೆಯಾಗಿದೆ.


ಸದ್ಯದ ಮಟ್ಟಿಗೆ ಸರಕಾರದ 9 ಸಾವಿರ ಹಣ ಯುವತಿಯ ಖಾತೆಗೆ ಜಮಾವಾಗಿದೆ. ಪ್ರಕರಣ ಸಂಬಂಧ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ. ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಇಲಾಖೆಯಿಂದ ಲಕ್ಷಗಟ್ಟಲೇ ಹಣ ಯುವತಿಯ ಖಾತೆಗೆ ಜಮಾವಾಗಿರೋ ಅನುಮಾನವಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶ ಪಡೆದಿದ್ದರು.
ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಉಂಟಾಗಿದೆ.
ಕೊಪ್ಪ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು