5:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅಮಾನತು

27/08/2024, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ಜಮೆಯಾಗಿರುವುದು ಪತ್ತೆಯಾಗಿದೆ.


ಸದ್ಯದ ಮಟ್ಟಿಗೆ ಸರಕಾರದ 9 ಸಾವಿರ ಹಣ ಯುವತಿಯ ಖಾತೆಗೆ ಜಮಾವಾಗಿದೆ. ಪ್ರಕರಣ ಸಂಬಂಧ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ. ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಇಲಾಖೆಯಿಂದ ಲಕ್ಷಗಟ್ಟಲೇ ಹಣ ಯುವತಿಯ ಖಾತೆಗೆ ಜಮಾವಾಗಿರೋ ಅನುಮಾನವಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶ ಪಡೆದಿದ್ದರು.
ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಉಂಟಾಗಿದೆ.
ಕೊಪ್ಪ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು