6:27 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು