8:12 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು