9:54 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು