8:30 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು