3:06 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು