7:02 AM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು