4:43 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ

31/03/2023, 10:34

ರಘುನಂದನ್ ಕೊರಟಗೆರೆ ಬೆಂಗಳೂರು

info.reporterkarnataka@gmail.com

ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯಾದಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಟಿಕೆಟ್ ಸಂಬಂಧಿಸಿದಂತೆ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವರೆಗೆ ಅಭಿಪ್ರಾಯ ಸಂಗ್ರಹ ನಡೆಯಲಿದೆ. ಇಂದಿನಿಂದಲೇ ಈ ಕಾರ್ಯ ಆರಂಭಗೊಳ್ಳಲಿದೆ. ನಂತರ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಳೆದು ತೂಗಿ ಟಿಕೆಟ್ ಹಂಚಿಕೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಕೆಲವು ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕೋರ್ ಕಮಿಟಿಯ ಸಭೆ ಏಪ್ರಿಲ್ 4ರ ಬಳಿಕ ನಡೆಯಲಿದೆ. ಅಭಿಪ್ರಾಯ ಸಂಗ್ರಹದ ಬಳಿಕ ಶಾರ್ಟ್ ಲಿಸ್ಟ್ ಸೆಂಟ್ರಲ್ ಕೋರ್ ಕಮಿಟಿಗೆ ಹೋಗಲಿದೆ. ಹಾಲಿ ಶಾಸಕರಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು