10:12 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬಂಡೇ ಬಸಾಪುರ ತಾಂಡದ ದೇವನಾಯ್ಕ ನಿಧನ: ಸಿಐಟಿಯು ಸಂತಾಪ

22/08/2021, 21:13

ಕೂಡ್ಲಗಿ(reporterkarnataka.com): ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಪಂ ವ್ಯ‍‍ಾಪ್ತಿ ಬಂಡೇ ಬಸಾಪುರ ತಾಂಡ ವಾಸಿ, ಗಾರೆ ಕೆಲಸ ಮಾಡುತಿದ್ದ ದೇವನಾಯ್ಕ (45) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅವರು ಬಹುದಿನಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು.
ಅವರಿಗೆ ಪತ್ನಿ ಹಾಗು ಓರ್ವ ಪುತ್ರಿ,ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಾರ್ಮಿಕರಿಂದ ಸಂತಾಪ:- ಕಟ್ಟಡ ಕಾರ್ಮಿಕ ದೇವನಾಯ್ಕ ನಿಧನಕ್ಕೆ ಸಿಐಟಿಯು ತಾಲೂಕು ಮುಖಂಡರಾದ ಗುನ್ನಳ್ಳಿ ರಾಘವೇಂದ್ರ,

ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಕೆ.ಹಟ್ಟಿ ಕೊತ್ಲಪ್ಪ ಹಾಗೂ ನಬಿಸಾಬ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ದೇವನಾಯ್ಕ ಅವರ ಅಗಲಿಕೆಗೆ ತಾಲೂಕಿನ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಬಂಜಾರ ಸಮುದಾಯ ಸೇರಿದಂತೆ ವಿವಿದ ಸಮುದಾಯದ ನಾಗರೀಕರು ಹಾಗೂ ತಾಂಡಗಳಲ್ಲಿನ ಸಂಘಟನೆಗಳು ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು  ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಮೃತರ  ಅಂತ್ಯಕ್ರಿಯೆ ಭಾನುವಾರ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು