1:09 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು

24/07/2021, 11:49

ಬಂಡಿಪೋರಾ(ReporterKarnataka.com)

ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು