10:57 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬಾಂಗ್ಲಾ ದೇಶದ ಹಿಂದುಗಳ ರಕ್ಷಿಸಿ: ಬಿ.ಸಿ. ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಡಾ. ಪ್ರಭಾಕರ ಭಟ್

12/08/2024, 22:47

ಬಂಟ್ವಾಳ(reporterkarnataka.com): ಬಾಂಗ್ಲಾ ದೇಶದಲ್ಲಿ ಉದೇಶಪೂರ್ವಕವಾಗಿ ನರಹತ್ಯೆ ನಡೆಯುತ್ತಿದೆ. ಹಿಂದುಗಳ ವಿರುದ್ಧ ಪ್ರತಿಕಾರ ನಡೆಯುತ್ತಿದೆ. ಇದು ಅತ್ಯಂತ ದುಃಖದ ಸಂಗತಿ ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಹೆಣ್ಣು ಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಹಿಂದುಗಳನ್ನು ಕೊಂದು ವಿಕೃತಿಯನ್ನು ಮೆರೆಯುತ್ತಿದ್ದಾರೆ. ಭಾರಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವ ನರಹತ್ಯೆಯನ್ನು ಖಂಡಿಸುವುದು ಮಾತ್ರವಲ್ಲ ಹಿಂದುಗಳಿಗೆ ಸೂಕ್ತ ರಕ್ಷಣೆಯೊಂದಿಗೆ ಬೆಂಬಲ ನೀಡಬೇಕಾಗಿದೆ ಎಂದು ಅವರು ಬಿ.ಸಿ.ರೋಡಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನುಡಿದರು.
ಬಾಂಗ್ಲಾದೇಶದಲ್ಲಿ ಈಗ ಕೇವಲ ಶೇ. 8ರಷ್ಟು ಹಿಂದುಗಳು ಉಳಿದಿದ್ದಾರೆ. ಅವರ ಬೆಂಬಲಕ್ಕೆ ಯಾರೂ ಇಲ್ಲ. ಹಿಂದುಗಳಿಗೆ ಅನ್ಯಾಯ ಮಾಡಿದಾಗ ವಿಪಕ್ಷ ಪಕ್ಷಗಳು ಮೌನವಾಗಿವೆ. ಅದೇ ಪರಿಸ್ಥಿತಿ ಭಾರತದಲ್ಲಿಯೂ ನಿರ್ಮಾಣವಾಗುತ್ತಿದೆ. ಹಿಂದುಗನ್ನು ಸರ್ವನಾಶ ಮಾಡುವ ಪ್ರಯತ್ನ ನಿರಂತರ ನಡೆಯುತ್ತಿದೆ. ಹಿಂದುಗಳಿಗೆ ಬದುಕುವ ಹಕ್ಕು ಇಲ್ಲವೇ ಎಂದು ಅವರು ಪ್ರಶ್ನಿಸಿದರು.


ರವಿ ಅಸೈಗೋಳಿ ಪ್ರಾಸ್ತಾವಿಕವಾಗಿ ಮಾತನಾಡಿ ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿದರು.
ಭಯಾನಕ ರೀತಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹತ್ಯೆ ಮಾಡಲಾಗುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಭಾರತೀಯರೆಲ್ಲ ಬಾಂಗ್ಲಾದೇಶದ ಹಿಂದುಗಳಿಗೆ ಬೆಂಬಲವಾಗಿ ನಿಲ್ಲಬೇಕು. ಎಂದರು.
ಬಾಂಗ್ಲಾ ಸರಕಾರವು ಅಲ್ಲಿನ ಹಿಂದುಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ನಾಶ ಮಾಡಿರುವ ಮನೆ ಹಾಗೂ ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಹಿಂದು ಹಿತರಕ್ಷಣ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೊಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿತ್ತು. ಮಾನವ ಸರಪಳಿಯನ್ನು ರಚಿಸಿ ಪ್ರತಿಭಟಿಸಿ ಘೋಷಣೆಗಳನ್ನು ಕೂಗಿದರು.
ಹಿಂದೂ ಹಿತರಕ್ಷಣ ಸಮಿತಿಯ ಪ್ರಮುಖರಾದ ಕೆ. ಪದ್ಮನಾಭ ಕೊಟ್ಟಾರಿ, ಪ್ರಸಾದ್ ರೈ,ಕ. ಕೃಷ್ಣಪ್ಪ, ಸುಜಿತ್ ಕಲ್ಲಡ್ಕ, ರತ್ನಾಕರ ಶೆಟ್ಟಿ, ಡಾ. ಕಮಲಾ ಪ್ರಭಾಕರ್ ಭಟ್ , ಸುಲೋಚನಾ ಜಿ.ಕೆ. ಭಟ್, ಸಚಿನ್ ಮೆಲ್ಕಾರ್, ಚೇತನ್ ಕಡೇಶ್ವಾಲ್ಯ, ಸನತ್ ಕುಮಾರ್ ಅನಂತಾಡಿ, ಸದಾಶಿವ ಬರಿಮಾರು, ಅಶೋಕ್ ಶೆಟ್ಟಿ ಸರಪಾಡಿ, ಚೆನ್ನಪ್ಪ ಕೋಟ್ಯಾನ್ ಸುಧಾಕರ ಶೆಟ್ಟಿ, ಕೇಶವ ದೈಪಲ, ಜನಾರ್ದನ ಬೊಂಡಾಲ, ಸಾಂತಪ್ಪ ಪೂಜಾರಿ, ರವೀಂದ್ರ ಕಂಬಳಿ , ಪ್ರಭಾಕರ ಪ್ರಭು, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಕಮಲಾಕ್ಷ ಶಂಭೂರು , ರಶ್ಮಿತ್ ಶೆಟ್ಟಿ, ರಾಜಾರಾಮ್ ನಾಯಕ್, ಪುರುಷೋತ್ತಮ ಸಾಲಿಯಾನ್ , ತನಿಯಪ್ಪ ಗೌಡ, ಹರೀಶ್ ಪೆರಾಜೆ, ರಮೇಶ್ ರಾವ್ ಮಂಚಿ, ಸನತ್ ಕುಮಾರ್ ಅನಂತಾಡಿ ಮೊದಲಾದ ಸಂಘ ಪರಿವಾರದ ಹಲವು ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು