12:16 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ

02/05/2022, 11:01

ಬೆಂಗಳೂರು(reporterkarnataka.com):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಮಳೆಯಾಗಲಿದೆ.

ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿ ಮಾತನಾಡಿ, ಮೇಲ್ಮೈ ಸುಳಿಗಾಳಿ, ವಿದರ್ಭದಿಂದ ಕರ್ನಾಟಕದವರೆಗೆ ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಹೆಚ್ಚಳದಿಂದ ರಾಜ್ಯದಲ್ಲಿ ಮಳೆ ಬೀಳುತ್ತಿದೆ. ಮುಂದಿನ 72 ಗಂಟೆ ಸಾಧಾರಣ ಮಳೆಯಾದರೆ . ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಬೀಳಲಿದೆ. ಮಳೆ ಬಿದ್ದರೆ ತಾಪಮಾನ ತುಸು ಕಡಿಮೆಯಾಗುತ್ತದೆ. ಆದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಇರಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು